ಭಯೋತ್ಪಾದಕರಿಂದ ಗುಂಡಿನ ದಾಳಿ !

Webdunia
ಶನಿವಾರ, 18 ಜೂನ್ 2022 (12:40 IST)
ಕಾಬೂಲ್ : ಅಫ್ಘಾಸ್ತಾನದ ರಾಜಧಾನಿಯಲ್ಲಿರುವ ಕಾರ್ತೆ ಪರ್ವಾನ್ ಗುರುದ್ವಾರದಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.
 
ಹಲವು ಸ್ಫೋಟಗಳಿಂದ ಸಾವು ನೋವುಗಳಾಗಿದ್ದು, ಈ ದಾಳಿಯ ಹಿಂದೆ ಐಸಿಸ್ ಖೊರಾಸನ್ ಕೈವಾಡವಿದೆ ಎಂದು ಶಂಕಿಸಲಾಗಿದೆ.

ಮೂಲಗಳ ವರದಿಯ ಪ್ರಕಾರ ಅಪರಿಚಿತ ಶಸ್ತ್ರಾಸ್ತ್ರಧಾರಿಯೊಬ್ಬ ಇಂದು ಮುಂಜಾನೆ ಗುರುದ್ವಾರಕ್ಕೆ ಪ್ರವೇಶಿಸಿದ್ದ ಎನ್ನಲಾಗಿದ್ದು, ಗುರುದ್ವಾರದಲ್ಲಿರುವವರೆಲ್ಲರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಗುರುದ್ವಾರದ ದಾಳಿಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಇದರ ಹೊರತಾಗಿ ಸಾವು-ನೋವುಗಳ ಬಗ್ಗೆ ಇನ್ನೂ ದೃಢೀಕೃತ ಮಾಹಿತಿಯಿಲ್ಲ. ಭದ್ರತಾಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು, ಭಯೋತ್ಪಾದಕರ ವಿರುದ್ಧ ಹೋರಾಟ ಮುಂದುವರಿದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.

ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಗುರುದ್ವಾರ ಕಾರ್ತೆ ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಅಫ್ಘಾನಿಸ್ತಾನದಲ್ಲಿರುವ ಸಿಖ್ಖರಿಗೆ ಜಾಗತಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments