Select Your Language

Notifications

webdunia
webdunia
webdunia
webdunia

ಕೊಲೆ ಆರೋಪಿಯನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡಿನ ದಾಳಿ

ಕೊಲೆ ಆರೋಪಿಯನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡಿನ ದಾಳಿ
ಕಾನ್ಪುರ , ಶುಕ್ರವಾರ, 3 ಜುಲೈ 2020 (09:50 IST)
ಕಾನ್ಪುರ : ಕೊಲೆ ಆರೋಪಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಯ ಬೆಂಬಲಿಗರು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 150ಕಿ.ಮೀ. ದೂರದಲ್ಲಿ ನಡೆದಿದೆ.

ವಿಕಾಸ್ ದುಬೆ ಎಂಬಾತನ ಮೇಲೆ ಕೊಲೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಆತನನ್ನು ಬಂಧಿಸಲು ಪೊಲೀಸರು ತಂಡ ಗ್ರಾಮಕ್ಕೆ ತೆರಳಿತ್ತು. ಆದರೆ ಆ ವೇಳೆ ಆತನ ಬೆಂಬಲಿಗರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.ಈ ಘಟನೆಯಲ್ಲಿ ಡಿವೈಎಸ್ಪಿ, ಮೂವರು ಸಬ್ ಇನ್ಸ್ ಪೆಕ್ಟರ್  ಹಾಗೂ ನಾಲ್ಕು ಮಂದಿ ಕಾಸ್ಟೇಬಲ್ ಸೇರಿ 8 ಮಂದಿ ಸಾವನಪ್ಪಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಈ ಬಗ್ಗೆ ತನಿಖೆ ನಡೆಸಿ  ಈ ಕೃತ್ಯ ಎಸಗಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ; 100ರ ಗಡಿ ದಾಟಿದೆ ಸಾವಿನ ಸಂಖ್ಯೆ