Select Your Language

Notifications

webdunia
webdunia
webdunia
webdunia

ಕಟ್ಟಡ ಕುಸಿದು ಐವರು ದಾರುಣ ಸಾವು!

ಕಟ್ಟಡ ಕುಸಿದು ಐವರು ದಾರುಣ ಸಾವು!
ಮುಂಬೈ , ಸೋಮವಾರ, 31 ಅಕ್ಟೋಬರ್ 2022 (07:35 IST)
ಮುಂಬೈ : ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ  ನಡೆದಿದೆ.

ಕಟ್ಟಡ ಕುಸಿದ ಬಳಿಕ ಅವಶೇಷಗಳಡಿಯಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಪವನೀತ್ ಕೌರ್ ತಿಳಿಸಿದ್ದಾರೆ. 

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಂತ್ರಸ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದ್ದು, ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ಬಸ್ಗಳಲ್ಲಿ ನಾಯಿಗಳಿಗೂ ಟಿಕೆಟ್