Webdunia - Bharat's app for daily news and videos

Install App

ಕಲ್ಯಾಣಿಯಲ್ಲಿ ಮುಳುಗಿ ಐವರು ಸಾವು!

Webdunia
ಗುರುವಾರ, 6 ಏಪ್ರಿಲ್ 2023 (09:09 IST)
ಚೆನ್ನೈ : ಪಂಗುಣಿ ಆಚರಣೆಯ ಅಂಗವಾಗಿ ಕಲ್ಯಾಣಿಯಲ್ಲಿ ಸ್ನಾನಕ್ಕೆಂದು ತೆರಳಿದ ಐವರು ಪುರೋಹಿತರು ನೀರಿನಲ್ಲಿ ಮುಳುಗಿ ಸಾವನ್ನಪಿರುವ ಘಟನೆ ತಮಿಳುನಾಡಿನ ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.
 
ಮೃತಪಟ್ಟವರನ್ನು ಸೂರ್ಯ (24), ರಾಘವನ್ (22), ಯೋಗೇಶ್ವರನ್ (23), ರಾಘವನ್ (18) ಹಾಗೂ ವನೇಶ್ (20) ಎಂದು ಗುರುತಿಸಲಾಗಿದೆ. ಪಂಗುಣಿ ಆಚರಣೆಯ ಅಂಗವಾಗಿ ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಾಸ್ಥಾನದ ಪುರೋಹಿತರು 10:30ರ ವೇಳೆಗೆ ಸ್ನಾನಕ್ಕೆಂದು ಮೂವರಸಂಪೇಟ್ ದೇವಸ್ಥಾನದ ಬಳಿಯಿದ್ದ ಕಲ್ಯಾಣಿಗೆ ತೆರಳಿದ್ದರು.

ಈ ವೇಳೆ ಒಬ್ಬರು ಕಾಲು ಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋಗಿ ಇನ್ನುಳಿದವರು ಸಾವನ್ನಪ್ಪಿದ್ದಾರೆ. ಎಲ್ಲಾ ಶವಗಳನ್ನು ನೀರಿನಿಂದ ಹೊರತೆಗೆದಿದ್ದು, ಈ ಕುರಿತು ತನಿಖೆ ಕೈಗೊಂಡಿದ್ದೇವೆ ಎಂದು ಚೆನ್ನೈ ಪೊಲೀಸ್ ಕಮಿಷನರ್ ಶಂಕರ್ ಜಿವಾಲ್ ಹೇಳಿಕೆ ನೀಡಿದ್ದಾರೆ. 

ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಐವರೂ ಚೆನ್ನೈನ ಮೂರು ಬೇರೆ ಬೇರೆ ಸ್ಥಳಗಳಿಗೆ ಸೇರಿದವರಾಗಿದ್ದು, ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಶೋಧ ಕಾರ್ಯವನ್ನು ಮುಂದುವರೆಸುತ್ತಿದೆ ಎಂದು ಅಗ್ನಿಶಾಮಕ ಹಾಗೂ ರಕ್ಷಣಾ ಸೇವೆಗಳ ಡಿಜಿಪಿ ಅಭಾಷ್ ಕುಮಾರ್ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಸಾಧಾರಣ ಮಳೆ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments