Select Your Language

Notifications

webdunia
webdunia
webdunia
webdunia

ಪೂಜಾರಿಯ ಜೀವಂತ ದಹನ ಮಾಡಿದ ದುಷ್ಕರ್ಮಿಗಳು

ಪೂಜಾರಿಯ ಜೀವಂತ ದಹನ ಮಾಡಿದ ದುಷ್ಕರ್ಮಿಗಳು
ಜೈಪುರ , ಶನಿವಾರ, 10 ಅಕ್ಟೋಬರ್ 2020 (11:37 IST)
ಜೈಪುರ: ದೇವಸ್ಥಾನದ ಆಸ್ತಿ ಒಡೆತನಕ್ಕೆ ಸಂಬಂಧಿಸಿದಂತೆ ಪೂಜಾರಿಯೊಬ್ಬರನ್ನು ಐವರು ದುಷ್ಕರ್ಮಿಗಳು ಜೀವಂತ ದಹನ ಮಾಡಿದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.


ಬಾಬು ಲಾಲ್ ವೈಷ್ಣವ್ ಎಂಬಾತ ಸಾವನ್ನಪ್ಪಿದ ವ್ಯಕ್ತಿ. ಐವರು ಆರೋಪಿಗಳು ಪೂಜಾರಿ ಜತೆ ವಾಗ್ವಾದ ನಡೆಸಿ ಕೊನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ತೀವ್ರ ಗಾಯಗೊಂಡ ಬಾಬು ಲಾಲ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಗೆ ಪ್ರತಿಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ದೂರಿದೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ