Webdunia - Bharat's app for daily news and videos

Install App

ಉಡಾನ್ ಯೋಜನೆಯಡಿಯಲ್ಲಿ ಸೆಪ್ಟೆಂಬರ್ ನಿಂದ ಮೈಸೂರು-ಚೆನ್ನೈ ನಡುವೆ ವಿಮಾನ ಹಾರಾಟ

Webdunia
ಭಾನುವಾರ, 30 ಜುಲೈ 2017 (08:13 IST)
ಬೆಂಗಳೂರು:ಏರ್‌ ಒಡಿಶಾ ಸಂಸ್ಥೆ ಚೆನ್ನೈ- ಮೈಸೂರು ಮಾರ್ಗದಲ್ಲಿ ನಿತ್ಯ ವಿಮಾನ ಸೇವೆ ಕಲ್ಪಿಸಲು ಮುಂದಾಗಿದೆ.ಚೆನ್ನೈನಿಂದ ಹೊರಟ ವಿಮಾನ ಮೈಸೂರಿಗೆ ರಾತ್ರಿ 8.45ಕ್ಕೆ ಆಗಮಿಸಲಿದೆ. ಮತ್ತೆ ರಾತ್ರಿ 9ಕ್ಕೆ ಚೆನ್ನೈಗೆ ಪ್ರಯಾಣಿಸಲಿದೆ.
 
ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿಯಲ್ಲಿ ಸೆಪ್ಟೆಂಬರ್ ನಲ್ಲಿ ಈ ವಿಮಾನ ಹಾರಾಟ ಸೇವೆ ಆರಂಭವಾಗಲಿದೆ. ನಾಗರಿಕ ವಿಮಾನಯಾನ ಸಚಿವಾಲಯವು ಏರ್‌ ಒಡಿಶಾ ಮತ್ತು ಮೇಘಾ ಏರ್‌ವೇಸ್‌ ಪ್ರೈವೇಟ್‌ ಲಿಮಿಟೆಡ್‌ ಜತೆ ಮೂರು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಂಡಿದೆ. ಏರ್‌ ಒಡಿಶಾ ಸಂಸ್ಥೆಯ ಅಧಿಕಾರಿಗಳು ಕೆಲದಿನಗಳ ಹಿಂದೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದು, ವಿಮಾನ ಹಾರಾಟದ ವೇಳಾಪಟ್ಟಿ ಅಂತಿಮಗೊಳಿಸಿದ್ದಾರೆ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಮನೋಜ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.
 
ಟ್ರು ಜೆಟ್‌ ತನ್ನ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಅಂತಿಮಗೊಳಿಸಲಿದೆ. ದಸರಾ ಅವಧಿಯಲ್ಲೇ ವಿಮಾನ ಸೇವೆ ಆರಂಭವಾಗುವುದು ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲಿದೆ. ಏರ್‌ ಒಡಿಶಾ ಸಂಸ್ಥೆ ವಿಮಾನದಲ್ಲಿ 19 ಮತ್ತು ಟ್ರು ಜೆಟ್‌ ವಿಮಾನದಲ್ಲಿ 72 ಮಂದಿ ಪ್ರಯಾಣಿಸಬಹುದು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments