ಪ್ರಯಾಣಿಕರನ್ನು ಬಿಟ್ಟುಹೋದ ವಿಮಾನ : ಗೋ ಫಸ್ಟ್ಗೆ DGCA ನೋಟಿಸ್

Webdunia
ಬುಧವಾರ, 11 ಜನವರಿ 2023 (07:35 IST)
ನವದೆಹಲಿ: ಸೋಮವಾರ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಬೇಕಿದ್ದ ಗೋ ಫಸ್ಟ್ ವಿಮಾನ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಟೇಕ್ ಆಫ್ ಆಗಿತ್ತು. ಇತ್ತೀಚೆಗೆ ವಿಮಾನಯಾನ ಸಂಸ್ಥೆಯಿಂದಾಗುತ್ತಿರುವ ಹಲವು ತಪ್ಪುಗಳಿಗೆ ವಿಮಾನಯಾನ ನಿಯಂತ್ರಕ ಡಿಜಿಸಿಎ ನೋಟಿಸ್ ಕಳುಹಿಸಿದೆ.

ಒಂದಾದಮೇಲೊಂದರಂತೆ ವಿಮಾನಯಾನ ಸಂಸ್ಥೆಯಿಂದಾಗುತ್ತಿರುವ ತಪ್ಪುಗಳಿಗೆ ಕಾರಣಗಳನ್ನು ನೀಡುವಂತೆ ಡಿಜಿಸಿಎ ನೋಟಿಸ್ ಕಳುಹಿಸಿದೆ. ಇದಕ್ಕೆ ಉತ್ತರಿಸಲು ಸಂಸ್ಥೆಗೆ 2 ವಾರಗಳ ಕಾಲಾವಕಾಶವನ್ನು ನೀಡಿದೆ.

ಸೋಮವಾರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6:30ಕ್ಕೆ ಗೋ ಫಸ್ಟ್ನ ಜಿ8 118 ವಿಮಾನ ದೆಹಲಿಗೆ ಟೇಕ್ ಆಫ್ ಆಗಿತ್ತು. ಆದರೆ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ವಿಮಾನ ಹತ್ತಿಸಿಕೊಳ್ಳುವುದಕ್ಕಿಂತಲೂ ಮೊದಲೇ ಹಾರಾಟ ಪ್ರಾರಂಭಿಸಿತ್ತು. 

ವರದಿಗಳ ಪ್ರಕಾರ ಸೋಮವಾರ ಬೆಳಗ್ಗೆ ದೆಹಲಿಗೆ ಹೊರಟಿದ್ದ ವಿಮಾನಕ್ಕೆ 4 ಬಸ್ಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲಾಗಿತ್ತು. ಪ್ರಯಾಣಿಕರು ತಮ್ಮ ಬೋರ್ಡಿಂಗ್ ಪಾಸ್ಗಳನ್ನು ಪಡೆದಿದ್ದು, ತಮ್ಮ ಲಗೇಜ್ಗಳನ್ನೂ ಪರಿಶೀಲಿಸಲಾಗಿತ್ತು. 3 ಬಸ್ಗಳಲ್ಲಿ ತೆರಳಿದ್ದ ಪ್ರಯಾಣಿಕರನ್ನು ವಿಮಾನ ಹತ್ತಿಸಿಕೊಂಡು ಟೇಕ್ ಆಫ್ ಆಗಿತ್ತು. ಆದರೆ ಒಂದು ಬಸ್ ನಿಲ್ದಾಣದಲ್ಲಿಯೇ ಉಳಿದುಹೋಗಿತ್ತು. ವಿಮಾನ ತಮ್ಮನ್ನು ಬಿಟ್ಟು ಹೋಗಿದ್ದನ್ನು ತಿಳಿದ ಕೆಲ ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಸಂಸ್ಥೆ ನಿರ್ಲಕ್ಷ್ಯವಹಿಸಿದೆ ಎಂದು ಕಿಡಿ ಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments