Webdunia - Bharat's app for daily news and videos

Install App

ಇಂದು ಕೇಂದ್ರ ಬಜೆಟ್: ಅಪಾರ ನಿರೀಕ್ಷೆ

Webdunia
ಬುಧವಾರ, 1 ಫೆಬ್ರವರಿ 2017 (08:38 IST)
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಇಂದು 2017-2018ರ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ನೋಟು ನಿಷೇಧದ ಬಳಿಕ ಮಂಡಿಸಲಾಗುತ್ತಿರುವ ಮೊದಲ ಬಜೆಟ್ ಆಗಿರುವುದರಿಂದ ಜನತೆಯಲ್ಲಿ ಭಾರೀ ನಿರೀಕ್ಷೆ ಹುಟ್ಟಿದೆ. ಮೋದಿ ಸರ್ಕಾರ ಮಂಡಿಸುತ್ತಿರುವ ನಾಲ್ಕನೆಯ ಬಜೆಟ್ ಇದಾಗಿದೆ. 
ನೋಟು ನಿಷೇಧದ ಬಳಿಕ ಮಂದಗತಿಗೆ ತಿರುಗಿರುವ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಅವಶ್ಯಕತೆಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್ ಹೊರಬೀಳಲಿದೆ ಎಂದು ಭಾವಿಸಲಾಗಿದೆ. 
 
ಇಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ವಿತ್ತ ಸಚಿವರು ಬಜೆಟ್ ಮಂಡಿಸಲಿದ್ದಾರೆ. ಸಾಮಾನ್ಯ ಬಜೆಟ್‌ನಲ್ಲಿ ರೈಲ್ವೆ ಬಜೆಟ್ ವಿಲೀನ ಮತ್ತು, ವಾಡಿಕೆಗಿಂತ ಒಂದು ತಿಂಗಳು ಮೊದಲು ಬಜೆಟ್ ಮಂಡನೆಯಾಗುತ್ತಿರುವುದು ಈ ಬಾರಿಯ ವಿಶೇಷ.
 
ನೋಟು ನಿಷೇಧದ ಸಂದರ್ಭದಲ್ಲಿ ಪ್ರಧಾನಿ ಮೋದಿ ಕೆಲ ಭರವಸೆಗಳನ್ನು ನೀಡಿದ್ದರಾದ್ದರಿಂದ ಇಂದು ಮಂಡನೆಯಾಗುತ್ತಿರುವ ಬಜೆಟ್ ಬಗ್ಗೆ ಜನರಲ್ಲಿ ಅಪಾರ ನಿರೀಕ್ಷೆಗಳಿವೆ. ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಯಾವುದೇ ಹೊರೆಯಾಗದ ಬಜೆಟ್ ಇದಾಗಲಿದೆ ಎಂದು ಹೇಳಲಾಗುತ್ತಿದೆ.
 
ಕಪ್ಪುಕುಳಗಳು ಮತ್ತು ಧನವಂತರ ಜೇಬಿಗೆ ಜೇಟ್ಲಿ ಕತ್ತರಿ ಹಾಕುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದ್ದು, ನಗದು ರಹಿತ ವ್ಯವಹಾರಕ್ಕೆ ಹೆಚ್ಚಿನ ಒತ್ತು ನೀಡುವ ವಿಶ್ವಾಸ ಆರ್ಥಿಕ ತಜ್ಞರದ್ದಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ