Webdunia - Bharat's app for daily news and videos

Install App

ದೇಶದಲ್ಲಿ ಅವಶ್ಯಕ ಪ್ರಮಾಣಕ್ಕಿಂತ ಅಧಿಕ ಆಹಾರೋತ್ಪಾದನೆ ಆಗುತ್ತಿದೆ : ಶೋಭಾ

Webdunia
ಶನಿವಾರ, 18 ಸೆಪ್ಟಂಬರ್ 2021 (11:37 IST)
ಅಂಕೋಲಾ : 'ಕೋವಿಡ್ ಸಂದರ್ಭದಲ್ಲಿಯೂ ಆಹಾರ ಉತ್ಪಾದನೆಯಲ್ಲಿ ದೇಶ ಗಮನಾರ್ಹ ಸಾಧನೆ ಮಾಡಿದೆ. ಕಳೆದ ವರ್ಷ ದೇಶದಲ್ಲಿ 305 ಮಿಲಿಯನ್ ಟನ್ ಆಹಾರ ಉತ್ಪಾದನೆ ಮತ್ತು 326 ಮಿಲಿಯನ್ ಟನ್ ತರಕಾರಿ ಉತ್ಪಾದನೆ ಮಾಡಿದ್ದು ದಾಖಲೆಯಾಗಿದೆ' ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಇಲ್ಲಿನ ಹೊಸಗದ್ದೆಯ ಬಿ.ಜೆ.ಪಿ ಬೂತ್ ಘಟಕದ ಅಧ್ಯಕ್ಷ ಸೋಮೇಶ್ವರ ಗೌಡ ಅವರ ಮನೆಯಲ್ಲಿ ನಾಮಫಲಕ ಅಂಟಿಸಿ ಮಾತನಾಡಿದ ಅವರು, 'ದೇಶದಲ್ಲಿ ಅವಶ್ಯಕ ಪ್ರಮಾಣಕ್ಕಿಂತ ಅಧಿಕ ಆಹಾರೋತ್ಪಾದನೆ ಆಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದೇಶದ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಹೆಚ್ಚಿಸಲು ರೈತರಿಗೆ ತರಬೇತಿ ಮತ್ತು ಮಾಹಿತಿ ಅವಶ್ಯಕತೆ ಇದೆ. ಕೃಷಿ ವಲಯದಲ್ಲಿ ಇಂದಿಗೂ ಹಲವು ಸಮಸ್ಯೆಗಳಿವೆ. ರೈತರ ಆದಾಯ ದ್ವಿಗುಣಗೊಳಿಸಲು ಅಗತ್ಯ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ಆಹಾರ ಸಂಸ್ಕರಣೆ ಮತ್ತು ಸಂಗ್ರಹಣೆ ಸುಧಾರಿಸಲು ಪ್ರಯತ್ನಿಸಲಾಗುತ್ತಿದೆ' ಎಂದು ಅವರು ಹೇಳಿದರು.
'ಮಾರಣಾಂತಿಕ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಹಿಂದಿನ ಸರ್ಕಾರ ಹೊರ ರಾಷ್ಟ್ರಗಳಲ್ಲಿ ತಯಾರಿಸಿದ ಲಸಿಕೆಯನ್ನು 3-4 ವರ್ಷಗಳ ನಂತರ ದೇಶದ ಜನರಿಗೆ ವಿತರಣೆ ಮಾಡುತ್ತಿತ್ತು. ಮೋದಿ ಸರ್ಕಾರ ಕೋವಿಡ್ ಕಾಣಿಸಿಕೊಂಡ 11 ತಿಂಗಳಲ್ಲಿ ಸ್ವದೇಶಿ ಲಸಿಕೆ ಸಿದ್ಧಪಡಿಸಿ ಜನರಿಗೆ ವಿತರಿಸಿದೆ' ಎಂದು ಸಚಿವರು ಹೇಳಿದರು.
ರಿಕ್ಷಾ ಚಲಾಯಿಸಿ ಪರಿಶ್ರಮದಿಂದ ಪ್ರಾಮಾಣಿಕವಾಗಿ ಜೀವನ ನಡೆಸುತ್ತಿರುವ ಕಾರ್ಯಕರ್ತರ ಮನೆಯಲ್ಲಿ ನಾಮ ಫಲಕ ಅಂಟಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಹೆಮ್ಮೆ ತಂದಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments