ದಾವೂದ್ ಭಾರತಕ್ಕೆ ಮರಳುವುದು ಮರೆತುಬಿಡಿ: ಮಾಜಿ ಪೊಲೀಸ್ ಆಯುಕ್ತ

Webdunia
ಗುರುವಾರ, 26 ಅಕ್ಟೋಬರ್ 2017 (18:51 IST)
ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ವಶದಲ್ಲಿರುವುದರಿಂದ ಭಾರತಕ್ಕೆ ಮರಳುವ ಸಾಧ್ಯತೆಗಳಿಲ್ಲ ಎಂದು ಮಾಜಿ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
1993ರಲ್ಲಿ ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ  257 ಮಂದಿ ಹತ್ಯೆಯಾಗಿ, 713 ಜನರಿಗೆ ಗಾಯಗಳಾಗಿದ್ದವು. ಒಟ್ಟು 27 ಕೋಟಿ ರೂಪಾಯಿ ಆಸ್ತಿ ನಷ್ಟವಾದ ಪ್ರಕರಣದಲ್ಲಿ ಪ್ರಮುಖ ರೂವಾರಿಯಾಗಿರುವ ಗ್ಯಾಂಗ್‌ಸ್ಟರ್ ದಾವೂದ್ ಸೆರೆಗೆ ಪೊಲೀಸರು ದಶಕಗಳಿಂದ ಯೋಜನೆಗಳನ್ನು ರೂಪಿಸಿದ್ದರು. 
 
ದಾವೂದ್ ಇಬ್ರಾಹಿಂ ಎಸಗಿದ ಅಪರಾಧಗಳನ್ನು ಮರೆಯಬೇಕು ಎಂದು ಹೇಳುತ್ತಿಲ್ಲ. ಆದರೆ, ದಾವೂದ್ ಭಾರತಕ್ಕೆ ಮರಳುವ ಬಗ್ಗೆ ಮರೆಯುವುದು ಸೂಕ್ತ. ಯಾಕೆಂದರೆ ದಾವೂದ್ ಐಎಸ್‌ಐ ವಶದಲ್ಲಿದ್ದಾನೆ. ಒಂದು ವೇಳೆ ದಾವೂದ್ ಭಾರತಕ್ಕೆ ಮರಳಲು ಪ್ರಯತ್ನಿಸಿದಲ್ಲಿ ಐಎಸ್‌ಐ ಅಧಿಕಾರಿಗಳು ದಾವೂದ್‌ನನ್ನು ಹತ್ಯೆ ಮಾಡುತ್ತಾರೆ ಎಂದು ಮಾಜಿ ಪೊಲೀಸ್ ಅಧಿಕಾರಿ ಎಂ.ಎನ್.ಸಿಂಗ್ ತಿಳಿಸಿದ್ದಾರೆ.
 
ದಾವೂದ್ ಇಬ್ರಾಹಿಂ ಎಂದರೆ ಭಯಬೀಳುತ್ತಿದ್ದ ಮುಂಬೈ ನಾಗರಿಕರಿಗೆ. ಇದೀಗ ಅದು ಮರೆಯಾಗಿದೆ. ಇಂತಹ ಗ್ಯಾಂಗ್‌ಗಳಿಗೆ ಸ್ಥಳೀಯ ರಾಜಕಾರಣಿಗಳು ಮತ್ತು ಪೊಲೀಸರು ಕೂಡಾ ಬೆಂಬಲ ನೀಡುತ್ತಿರುವುದು ಕಂಡು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
 
ನಾನು ಮುಂಬೈ ಸ್ಫೋಟದ ಪ್ರಕರಣದ ತನಿಖೆ ನಡೆಸುತ್ತಿರುವಾಗ ಇಬ್ಬರು ಪೊಲೀಸ್ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದರು. ಅವರನ್ನು ಕೆಲಸದಿಂದ ವಜಾಗೊಳಿಸಿದ್ದೆ. ಇದೊಂದು ದುರದೃಷ್ಟಕರ ಸಂಗತಿ ಎಂದು ಮಾಜಿ ಪೊಲೀಸ್ ಅಧಿಕಾರಿ ಎಂ.ಎನ್.ಸಿಂಗ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ
Show comments