Webdunia - Bharat's app for daily news and videos

Install App

ಅಗಲಿದ ಅಟಲ್ ಪಾಕ್ ನಲ್ಲೂ ಎಷ್ಟು ಜನಪ್ರಿಯತೆ ಇದೆ ಎನ್ನುವುದು ಈ ಮೂಲಕ ಜಾಹೀರು!

Webdunia
ಶುಕ್ರವಾರ, 17 ಆಗಸ್ಟ್ 2018 (11:59 IST)
ನವದೆಹಲಿ: ನಿನ್ನೆ ನಮ್ಮನ್ನಗಲಿದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ ಅಂತಿಮ ನಮನ ಸಲ್ಲಿಸಲು ಪಾಕಿಸ್ತಾನ, ಭೂತಾನ್ ನಿಂದ ನಾಯಕರು ಆಗಮಿಸುತ್ತಿದ್ದಾರೆ.
 

ಪಾಕಿಸ್ತಾನದ ಕಾನೂನು ಸಚಿವರ ನೇತೃತ್ವದಲ್ಲಿ ನಿಯೋಗವೊಂದು ದೆಹಲಿಗೆ ಭೇಟಿ ನೀಡಿ ಅಟಲ್ ಬಿಹಾರಿ ವಾಜಪೇಯಿಗೆ ಅಂತಿಮ ನಮನ ಸಲ್ಲಿಸಲಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಎಂಥದ್ದೇ ವೈಮನಸ್ಯವಿದ್ದರೂ ಭಾರತದ ನಾಯಕನಿಗೆ ಆ ದೇಶದ ನಾಯಕರು ಗೌರವ ಸಲ್ಲಿಸುತ್ತಿರುವುದು ಅಟಲ್ ಜನಪ್ರಿಯತೆಗೆ ಸಾಕ್ಷಿಯಾಗಿದೆ.

ಇನ್ನೊಂದೆಡೆ ಭೂತಾನ್ ದೇಶದ ದೊರೆ ಜಿಗ್ಮೆ ಕೇಸರ್ ಕೂಡಾ ಭಾರತಕ್ಕೆ ಆಗಮಿಸಿ ವಾಜಪೇಯಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದರೊಂದಿಗೆ ವಾಜಪೇಯಿ ಅವರು ನೆರೆಯ ರಾಷ್ಟ್ರಗಳೊಂದಿಗೆ ಹೊಂದಿದ್ದ ಸ್ನೇಹ ಸಂಬಂಧಕ್ಕೆ ನಿಜವಾದ ಅರ್ಥ ಬಂದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments