Webdunia - Bharat's app for daily news and videos

Install App

ಪಕ್ಷಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮಾಜಿ ಸಚಿವ, ಹಾಲಿ ಶಾಸಕ ಜ್ಞಾನಶ್ಯಾಮ್ ತಿವಾರಿ

Webdunia
ಮಂಗಳವಾರ, 26 ಜೂನ್ 2018 (19:18 IST)
ಜೈಪುರ : ರಾಜಸ್ಥಾನ  ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಆಡಳಿತ ಪಕ್ಷ ಬಿಜೆಪಿಯ ಮಾಜಿ ಸಚಿವ, ಹಾಲಿ ಶಾಸಕ ಜ್ಞಾನಶ್ಯಾಮ್ ತಿವಾರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಸೋಮವಾರ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಜ್ಞಾನಶ್ಯಾಮ್ ತಿವಾರಿ ಅವರು  ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಬಿಜೆಪಿಯಿಂದ ಐದನೇ ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಸಂಗನೇರ್ ಕ್ಷೇತ್ರದ ಹಾಲಿ ಶಾಸಕ ತಿವಾರಿ 60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.  ರಾಜ್ಯದಲ್ಲಿ ಹಿರಿಯ ನಾಯಕರಾಗಿದ್ದ ತಿವಾರಿ ಅವರು ಸಿಎಂ ವಸುಂಧರಾ ರಾಜೆ ಜೊತೆಗೆ ಉತ್ತಮ ಬಾಂಧವ್ಯ ಹೊಂದಿರಲಿಲ್ಲ ಎನ್ನಲಾಗಿದೆ. ಹಾಗೇ ಪಕ್ಷಕ್ಕೆ ರಾಜೀನಾಮೆ ನೀಡಿದ ಅವರು ತಮ್ಮ ಮಗ ಅಖಿಲೇಶ್ ಸ್ಥಾಪಿಸಿರುವ ಭಾರತ್ ವಾಹಿನಿ ಪಾರ್ಟಿಗೆ ಸೇರಲಿದ್ದಾರೆ ಎಂದು ಹೇಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments