ರಾಂಚಿ (ಜಾರ್ಖಂಡ್): ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾದ ಸಹ-ಸಂಸ್ಥಾಪಕ ಶಿಬು ಸೊರೆನ್ ಅವರ ನಿಧನದ ಹಿನ್ನೆಲೆಯಲ್ಲಿ ಜಾರ್ಖಂಡ್ ಸರ್ಕಾರವು ಸೋಮವಾರದಿಂದ ಮೂರು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ.
ಆಗಸ್ಟ್ 4 ರಿಂದ ಆಗಸ್ಟ್ 6 ರವರೆಗೆ ಶೋಕಾಚರಣೆ ಆಚರಿಸಲಾಗುವುದು ಎಂದು ಜಾರ್ಖಂಡ್ ಸರ್ಕಾರ ಆದೇಶವನ್ನು ಹೊರಡಿಸಿದೆ.
ಶೋಕಾಚರಣೆಯ ಸಂದರ್ಭದಲ್ಲಿ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಇಡಲಾಗುವುದು, ಯಾವುದೇ ರಾಜ್ಯ ಕಾರ್ಯಕ್ರಮವನ್ನು ಆಯೋಜಿಸಲಾಗುವುದಿಲ್ಲ ಮತ್ತು ರಾಜ್ಯ ಸರ್ಕಾರದ ಎಲ್ಲ ಕಚೇರಿಗಳನ್ನು ಮುಚ್ಚಲಾಗುವುದು.
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಶಿಬು ಸೊರೆನ್ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಇಂದು ಕೊನೆಯುಸಿರೆಳೆದರು. ಸಚಿವ ಶಿಬು ಸೊರೇನ್ ಅವರು ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು ಮತ್ತು ಒಂದೂವರೆ ತಿಂಗಳ ಹಿಂದೆ ಪಾರ್ಶ್ವವಾಯುವಿಗೆ ಒಳಗಾಗಿದ್ದರು. ಕಳೆದ ಒಂದು ತಿಂಗಳಿನಿಂದ ಅವರು ಲೈಫ್ ಸಪೋರ್ಟ್ನಲ್ಲಿದ್ದರು.