Webdunia - Bharat's app for daily news and videos

Install App

ದೆಹಲಿ ವಿಧಾನಸಭೆಯಲ್ಲಿ ಕಪಿಲ್ ಮಿಶ್ರಾ ಮೇಲೆ ಹಲ್ಲೆ

Webdunia
ಬುಧವಾರ, 31 ಮೇ 2017 (15:48 IST)
ನವದೆಹಲಿ:ಮೇ-31: ಆಮ್ ಆದ್ಮಿ ಪಕ್ಷದ ಬಂಡಾಯ ಶಾಸಕ ಹಾಗೂ ಮಾಜಿ ಸಚಿವ ಕಪಿಲ್ ಮಿಶ್ರಾ ಮೇಲೆ ಆಪ್ ಶಾಸಕರು ದೆಹಲಿ ವಿಧಾನಸಭೆಯ ಒಳಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
 
ಜಿಎಸ್ ಟಿ ಮಸೂದೆ ಕುರಿತು ಚರ್ಚಿಸಲು ಇಂದು ದೆಹಲಿ ವಿಧಾನಸಭೆ ವಿಶೇಷ ಅಧಿವೇಶನ ಕರೆಯಲಾಗಿದ್ದು, ಕಲಾಪ ಆರಂಭವಾಗುತ್ತಿದ್ದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಘೋಷಣೆ ಕೂಗಲು ಯತ್ನಿಸಿದ ಕಪಿಲ್ ಮಿಶ್ರಾ ಮೇಲೆ ಆಪ್ ಶಾಸಕರು ಹಲ್ಲೆ ನಡೆಸಿದ್ದಾರೆ. ಈ ವೇಳೆ ಪ್ರತಿಪಕ್ಷ ಸದಸ್ಯರು ಮಿಶ್ರಾ ರಕ್ಷಣೆಗೆ ಧಾವಿಸಿದ್ದಾರೆ.
 
ವಿಧಾನಸಭೆಯಲ್ಲಿ ಆಡಳಿತ, ಪ್ರತಿಪಕ್ಷಗಳ ಹಾಗೂ ಭಿನ್ನಮತಿಯ ಶಾಸಕರ ನಡುವೆ ಭಾರಿ ಹೈಡ್ರಾಮಾ ನಡೆದ ನಂತರ ಕಪಿಲ್ ಮಿಶ್ರಾ ಅವರನ್ನು ಮಾರ್ಷೆಲ್ ಗಳ ಮೂಲಕ ಸದನದಿಂದ ಹೊರ ಹಾಕಲಾಯಿತು. 
 
ಹಲ್ಲೆ ಬಳಿಕ ಮಾತನಾಡಿದ ಕಪಿಲ್ ಮಿಶ್ರಾ, ಆಮ್ ಆದ್ಮಿ ಪಕ್ಷದ ನಾಲ್ಕೈದು ಶಾಸಕರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನನಗೆ ಕಾಲಿನಿಂದ ಒದ್ದಿದ್ದಾರೆ. ಶಾಸಕರು ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದರೆ, ಅರವಿಂದ್ ಕೇಜ್ರಿವಾಲ್ ಅವರು ಅದನ್ನು ನೋಡಿ ನಗುತ್ತಿದ್ದರು... ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಸೂಚನೆ ಮೆರೆಗೆ ಶಾಸಕರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಆದರೆ ನಾನು ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಗುಡುಗಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments