Webdunia - Bharat's app for daily news and videos

Install App

ಪ್ರಧಾನಿ ಮೋದಿ ಮತ್ತೊಬ್ಬ ಗಾಂಧೀಜಿಯಂತೆ: ಸಚಿವ ಮಹೇಶ್ ಶರ್ಮಾ

Webdunia
ಶುಕ್ರವಾರ, 14 ಜುಲೈ 2017 (15:50 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಅನೇಕ ತಲೆಮಾರುಗಳಿಗೆ ಸ್ಫೂರ್ತಿ ನೀಡಿದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರಂತೆ ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ಹೊಗಳಿಕೆಯ ಸುರಿಮಳೆಗೈದಿದ್ದಾರೆ.
 
ಗಾಂಧಿಯವರ ಉಪ್ಪಿನ ಸತ್ಯಾಗ್ರಹ ಕುರಿತ ಪುಸ್ತಕವೊಂದರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಂಸ್ಕೃತಿ ಖಾತೆ ಸಚಿವ ಶರ್ಮಾ, ಸ್ಪೂರ್ತಿಯಾಗಿರುವ ಪ್ರಧಾನಿ ಮೋದಿ ನಮಗೆ ಮತ್ತೊಬ್ಬ ಗಾಂಧೀಜಿಯ ರೂಪದಲ್ಲಿ ಬಂದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಸ್ವಾತಂತ್ರ್ಯ ಹೋರಾಟಕ್ಕೆ ಗಾಂಧಿಯವರ ಕೊಡುಗೆ ಬಗ್ಗೆ ಸಚಿವರು ಮಾತನಾಡುತ್ತಾ, ಉಪ್ಪಿನ ಸತ್ಯಾಗ್ರಹವು ಕೇವಲ ಚಿಟಿಕೆ ಉಪ್ಪಿನ ವಿಷಯ ಮಾತ್ರವಲ್ಲ, ಅನೇಕ ತಲೆಮಾರುಗಳಿಗೆ ಸ್ಪೂರ್ತಿದಾಯಕ ಹೋರಾಟವಾಗಿದೆ. ಅದರಂತೆ ಪ್ರಧಾನಿ ಮೋದಿ ಕಾರ್ಯವೈಖರಿ ಕೂಡಾ ಹಲವಾರು ತಲೆಮಾರುಗಳಿಗೆ ಸ್ಪೂರ್ತಿದಾಯಕವಾಗಿರುತ್ತದೆ ಎಂದಿದ್ದಾರೆ.
 
ಪ್ರಧಾನಮಂತ್ರಿ ಮೋದಿ ದೇಶದ ಪ್ರತಿಯೊಬ್ಬ ಪ್ರಜೆಗೆ ಸ್ವಾತಂತ್ರ್ಯದ ಸವಿ ತಲುಪಬೇಕು ಎನ್ನುವುದೇ ಅವರ ಅಭಿಪ್ರಾಯವಾಗಿದೆ. ಗಾಂಧೀಜಿಯವರ ಕನಸುಗಳನ್ನು ನನಸಾಗಿಸುವುದೇ ಅವರ ಗುರಿಯಾಗಿದೆ. ಮಾನವೀಯತೆಯಿಂದ ಅವರ ಕನಸುಗಳನ್ನು ವಿಶ್ವದಾದ್ಯಂತ ಹರಡಿಸುವುದೇ ಸಂಸ್ಕ್ರತಿ ಸಚಿವಾಲಯದ ಕರ್ತವ್ಯವಾಗಿದೆ ಎಂದು ಕೇಂದ್ರ ಸಚಿವ ಮಹೇಶ್ ಶರ್ಮಾ ತಿಳಿಸಿದ್ದಾರೆ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಮುಂದಿನ ಸುದ್ದಿ
Show comments