Webdunia - Bharat's app for daily news and videos

Install App

ಚಾಕುವಿನಿಂದ ಬೆದರಿಸಿ 20 ವರ್ಷದ ಯುವತಿಯ ಮೇಲೆ ಗ್ಯಾಂಗ್‌ರೇಪ್

Webdunia
ಶುಕ್ರವಾರ, 13 ಅಕ್ಟೋಬರ್ 2017 (15:48 IST)
ಬಾಯ್‌ಫ್ರೆಂಡ್‌ನೊಂದಿಗೆ ನಿರ್ಜನ ಪ್ರದೇಶದಲ್ಲಿರುವಾಗ ನಾಲ್ವರು ಕಾಮುಕರು ಬಾಯ್‌ಫ್ರೆಂಡ್ ಮೇಲೆ ಹಲ್ಲೆ ಮಾಡಿ 20 ವರ್ಷದ ಯುವತಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ಘಟನೆ ಕಾಂಚೀಪುರಂ ಜಿಲ್ಲೆಯ ಚೆಯ್ಯೂರ್ ಬಳಿಯಿರುವ ನೆಡುಮಾರನ್‌ ಪಟ್ಟಣದಲ್ಲಿ ನಡೆದಿದೆ.
ಚೆನ್ನೈನಿಂದ 80 ಕಿ.ಮೀ ದೂರದ ಇಸಿಆರ್‌ ರಸ್ತೆಯಲ್ಲಿರುವ ಕೂವತ್ತೂರ್‌ನ ಜವಳಿ ಅಂಗಡಿಯಲ್ಲಿ ಉದ್ಯೋಗಿಯಾಗಿರುವ ಯುವತಿ ಮತ್ತು ಆಕೆಯ ಬಾಯ್‌ಫ್ರೆಂಡ್ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಮೂವರು ಶಂಕಿತರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. 
 
ಘಟನೆ ನಡೆದ ಸ್ಥಳದಲ್ಲಿ ನೆರೆಹೊರೆಯವರನ್ನು ವಿಚಾರಣೆ ನಡೆಸಿದಾಗ ಕೆಲ ಯುವಕರು ಅವಸರದಲ್ಲಿ ತಮ್ಮ ಬೈಕ್‌ಗಳೊಂದಿಗೆ ತೆರಳಿರುವ ಮಾಹಿತಿ ಲಭಿಸಿದೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಪೊಲೀಸ್ ಮೂಲಗಳ ಪ್ರಕಾರ, ಚೆಯ್ಯೂರ್‌ನಲ್ಲಿರುವ ಯುವತಿ, ತಾನು ನಿರ್ವಹಿಸುತ್ತಿದ್ದ ಅಂಗಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದ ಯುವಕನೊಂದಿಗೆ ಲವ್ವಿಡವ್ವಿಯಲ್ಲಿ ತೊಡಗಿದ್ದಳು. ಹಲವಾರು ಬಾರಿ ಇಬ್ಬರು ನಿರ್ಜನ ಪ್ರದೇಶದಲ್ಲಿ ಕೆಲ ಕಾಲ ಸಮಯ ಕಳೆಯುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.
 
ಸೋಮುವಾರದಂದು ರಾತ್ರಿ ಅಂಗಡಿ ಮುಚ್ಚಿದ ನಂತರ ಇಬ್ಬರು ನೆಡುಮಾರನ್‌ ಬಳಿಯಿರುವ ನಿರ್ಜನ ಪ್ರದೇಶದಲ್ಲಿ ಮರದ ಕೆಳಗೆ ಕುಳಿತಿದ್ದಾಗ ಆರೋಪಿಗಳು ನೋಡಿ ಅತ್ಯಾಚಾರದ ತಂತ್ರ ರೂಪಿಸಿದ್ದರು. ಒಬ್ಬನು ಬಾಯ್‌ಫ್ರೆಂಡ್‌ಗೆ ಚಾಕುವಿನಿಂದ ಬೆದರಿಸಿ ಒತ್ತೆಯಾಳಾಗಿ ಇರಿಸಿಕೊಂಡಿದ್ದರೆ, ಇತರ ಮೂವರು ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾರೆ.
 
ಆರೋಪಿಗಳು ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ನೆಡುಮಾರನ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಊಹಿಸಲಾಗದ ಹವಾಮಾನದಲ್ಲಿ ವ್ಯತ್ಯಯ

ರಾತ್ರೋರಾತ್ರಿ ಬೆಚ್ಚಿದ ಜಮ್ಮು, ಕಾಶ್ಮೀರದ ಜನತೆ: ಮೇಘಸ್ಫೋಟಕ್ಕೆ ನಾಲ್ಕು ಬಲಿ

ಮಾಸ್ಕ್‌ಮ್ಯಾನ್‌ಗೆ ನಡುಕ: ಧರ್ಮಸ್ಥಳಕ್ಕೆ ದೌಡಾಯಿಸಿದ ವಿಜಯೇಂದ್ರ ನೇತೃತ್ವದ ಬಿಜೆಪಿ ತಂಡ

ಶುಭಾಂಶು ಶುಕ್ಲಾ ತಾಯ್ನಾಡಿಗೆ ಇಳಿಯುತ್ತಿದ್ದ ಹಾಗೇ ಎಲ್ಲರ ಮುಖದಲ್ಲೂ ಖುಷಿಯೋ ಖುಷಿ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಮುಂದಿನ ಸುದ್ದಿ
Show comments