ವೇಶ್ಯಾವಾಟಿಕೆಯಿಂದ ತಪ್ಪಿಸಿಕೊಂಡ ಈ ಬಾಲಕಿಯ ಭಯಾನಕ ಕೇಳಿದರೆ ಬೆಚ್ಚಿ ಬೀಳುತ್ತೀರಿ!

Webdunia
ಸೋಮವಾರ, 31 ಜನವರಿ 2022 (09:48 IST)
ಚೆನ್ನೈ: ನಾಲ್ವರು ಅಪ್ರಾಪ್ತರನ್ನು ವೇಶ‍್ಯಾವಾಟಿಕೆಗೆ ತಳ್ಳಿದ ಆರೋಪದಲ್ಲಿ ಓರ್ವ ಮಹಿಳೆ ಹಾಗೂ ಆಕೆಯ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲಸ ಕೊಡಿಸುವುದಾಗಿ ತಮಿಳುನಾಡಿನ ಗ್ರಾಮವೊಂದರಿಂದ ಚೆನ್ನೈಗೆ ಹುಡುಗಿಯರನ್ನು ಕರೆತಂದಿದ್ದ ಮಹಿಳೆ ಬಳಿಕ ಅವರನ್ನು ಬಾಡಿಗೆ ಮನೆಯೊಂದರಲ್ಲಿ ಕೂಡಿಹಾಕಿದ್ದಳು. ಅಲ್ಲಿ ತನ್ನ ಸಹಚರರಿಂದ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಆ ದೃಶ್ಯಗಳನ್ನು ಚಿತ್ರೀಕರಿಸಿಕೊಂಡು ಬೆದರಿಕೆ ಹಾಕಿ ತನ್ನ ಕೆಲಸ ಮಾಡಿಸುತ್ತಿದ್ದಳು.

ಈ ಬಾಲಕಿಯರು ಪ್ರತಿನಿತ್ಯ ಸಂಜೆ ಏಳು ಗಂಟೆಯಿಂದ ಬೆಳಗ್ಗಿನವರೆಗಿನ ಅವಧಿಯಲ್ಲಿ ಆರು ಪುರುಷರೊಂದಿಗೆ ದೇಹ ಹಂಚಿಕೊಂಡು 50,000 ರೂ.ವರೆಗೆ ಸಂಪಾದಿಸಬೇಕಿತ್ತು. ಆದರೆ ಗಣರಾಜ್ಯೋತ್ಸವ ದಿನ ಬಾಲಕಿಯರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲು ಮಹಿಳೆ ತೀರ್ಮಾನಿಸಿದ್ದಳು. ಆದರೆ ಈ ನಡುವೆ ಬಾಲಕಿಯೋರ್ವಳು ಪೊಲೀಸರನ್ನು ಸಂಪರ್ಕಿಸಿದ್ದಳು. ಅದರಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಪೇದೆಗಳು ಸಂತ್ರಸ್ತ ಬಾಲಕಿಯರನ್ನು ರಕ್ಷಿಸುವ ಬದಲು ಆರೋಪಿಗಳಿಂದ ಲಂಚ ಪಡೆದು ಅವರಿಗೇ ಸಹಾಯ ಮಾಡಿದ್ದರು.

ಆದರೆ ಬೆಂಗಳೂರಿಗೆ ಸಾಗಿಸುವ ಯತ್ನದ ನಡುವೆ ಬಾಲಕಿಯೊಬ್ಬಳು ತಪ್ಪಿಸಿಕೊಂಡು ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ ತಮ್ಮ ಧಾರುಣ ಕತೆಯನ್ನು ಹೇಳಿಕೊಂಡಿದ್ದಳು. ಅದರಂತೆ ಪೊಲೀಸರು ದಾಳಿ ನಡೆಸಿ ಬಾಲಕಿಯರನ್ನು ರಕ್ಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ