Webdunia - Bharat's app for daily news and videos

Install App

ಮಹಾರಾಷ್ಟ್ರ: ಪೊಲೀಸ್‌ ಎನ್‌ಕೌಂಟರ್‌ಗೆ ನಾಲ್ವರು ನಕ್ಸಲರು ಬಲಿ

Sampriya
ಮಂಗಳವಾರ, 19 ಮಾರ್ಚ್ 2024 (14:26 IST)
WD
ಗಡ್ಚಿರೋಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 
 
ಮುಂಬರುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಉದ್ದೇಶದಿಂದ ಕೆಲ ನಕ್ಸಲರು ನೆರೆಯ ತೆಲಂಗಾಣದಿಂದ ಪ್ರಾಣಹಿತ ನದಿ ದಾಟಿ ಗಡ್ಚಿರೋಲಿಗೆ ಪ್ರವೇಶಿಸುವ ವೇಳೆ ಗುಂಡಿನ ಚಕಮಕಿ ನಡೆದಿದೆ. 
 
ನಕ್ಸಲರು ಪ್ರವೇಶಿಸುವ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸರ ವಿಶೇಷ ಸಿ-60 ಕಮಾಂಡೋಗಳು ಮತ್ತು ಸಿಆರ್‌ಪಿಎಫ್ ಕಮಾಂಡೋಗಳು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು.  
 
ಇಂದು ಬೆಳಿಗ್ಗೆ ಕೋಲಮಾರ್ಕ ಪರ್ವತಗಳಲ್ಲಿ ಶೋಧ ನಡೆಸುತ್ತಿದ್ದಾಗ ನಕ್ಸಲರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ನಕ್ಸಲರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments