Webdunia - Bharat's app for daily news and videos

Install App

ಕೋವಿಡ್ನಿಂದ ಅನಾಥರಾಗಿರುವ ಮಕ್ಕಳಿಗೆ ಉಚಿತ 5 ಲಕ್ಷ ರೂ ವಿಮೆ; ಮೋದಿ ಯೋಜನೆ ಜಾರಿ!

Webdunia
ಶುಕ್ರವಾರ, 6 ಆಗಸ್ಟ್ 2021 (08:09 IST)
ನವದೆಹಲಿ(ಆ.06):  ಕೊರೋನಾ ವೈರಸ್ ಕಾರಣ ಅನಾಥರಾಗಿರುವ ಮಕ್ಕಳಿಗೆ ಕೇಂದ್ರ ಸರ್ಕಾರ ಹಲವು ಸೌಲಭ್ಯ ಘೋಷಿಸಿದೆ. ಇದೀಗ ಕೇಂದ್ರ ಈ ಹಿಂದೆ ಘೋಷಿಸಿದ ಯೋಜನೆಗಳು ಅನುಷ್ಠಾನಕ್ಕೆ ಬಂದಿದೆ. ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 18 ವರ್ಷದ ವರೆಗೆ ಉಚಿತ ವಿಮೆ ಯೋಜನೆ ಜಾರಿಗೆ ತಂದಿದೆ.

ಮೇ 29 ರಂದು ಪ್ರಧಾನಿ ನರೇಂದ್ರ ಮೋದಿ ಮಕ್ಕಳಿಗೆ ಪಿಎಂ ಕೇರ್ಸ್ ಫಂಡ್ ವಿನಿಯೋಗಿಸುವ ಯೋಜನೆ ಘೋಷಿಸಿದ್ದರು. ಇದೀಗ ಮೋದಿ ಘೋಷಿಸಿದ್ದ ಯೋಜನೆಗಳು ಜಾರಿಗೆ ಬಂದಿದೆ. ಈ ಕುರಿತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಕೋವಿಡ್ನಿಂದ ಪೋಷಕರ ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತ 5 ಲಕ್ಷ ರೂಪಾಯಿ ವಿಮೆ ನೀಡಲಿದೆ. ವಿಮೆಯ ಕಂತನ್ನು ಪಿಎಂ ಕೇರ್ಸ್ ಫಂಡ್ನಿಂದ ಭರಿಸಲಿದೆ. ಮಕ್ಕಳಿಗೆ 18 ವರ್ಷದ ವರೆಗೆ ಈ ವಿಮೆ ಇರಲಿದೆ. ಆಯುುಷ್ಮಾನ್ ಭಾರತ್ ಯೋಜನೆಯಡಿ ಮಕ್ಕಳಿಗೆ ವಿಮೆ ಸೌಲಭ್ಯ ನೀಡಲಿದೆ. ಈ ಮೂಲಕ ಮಕ್ಕಳಿಗೆ ಸುರಕ್ಷಿತ ವಿಮೆಯನ್ನು ಸರ್ಕಾರವೇ ನೀಡಲಿದೆ.
ಇನ್ನು ಈ ಮಕ್ಕಳ ಶಿಕ್ಷಣಕ್ಕೆ ವಿಶೇಷ ಯೋಜನೆ ಘೋಷಿಸಲಾಗಿದೆ. 18 ವರ್ಷದ ವರೆಗೆ ಇದೇ ಮಕ್ಕಳಿಗೆ ಪ್ರತಿ ತಿಂಗಳು ಪರಿಹಾರ ಹಣ ನೀಡಲಾಗುತ್ತದೆ. ಇನ್ನು 23 ವರ್ಷದ ಬಳಿಕ 10 ಲಕ್ಷ ರೂಪಾಯಿ ಹಣವನ್ನು ನೀಡಲಾಗುತ್ತಿದೆ. ಈ ಎಲ್ಲಾ ಯೋಜನೆಗಳು ಜಾರಿಗೆ ಬಂದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments