Webdunia - Bharat's app for daily news and videos

Install App

ಬಡವನೆಂದು ಪರಿಗಣಿಸಿ ಕೇಜ್ರಿ ಪರ ಉಚಿತವಾಗಿ ವಾದಿಸುತ್ತೇನೆಂದ ಜೇಠ್ಮಲಾನಿ

Webdunia
ಮಂಗಳವಾರ, 4 ಏಪ್ರಿಲ್ 2017 (17:29 IST)
ಮಾನನಷ್ಟ ಮೊಕದ್ದಮೆಯ ವಕಾಲತ್ತಿಗಾಗಿ ರಾಮ್ ಜೇಠ್ಮಲಾನಿ ನೀಡಿರುವ 3.8 ಕೋಟಿ ರೂ. ಬಿಲ್ ಪೇಮೆಂಟ್`ಗಾಗಿ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್`ಗೆ ಕಳುಹಿಸಿದ್ದ ವಿಷಯ ಭಾರೀ ಸುದ್ದಿಯಾಗಿತ್ತು. ಜನರ ತೆರಿಗೆ ಹಣವನ್ನ ವೈಯಕ್ತಿಕ ಮಾನನಷ್ಟ ಮೊಕದ್ದಮೆಯ ವಕಾಲತ್ತು ವಹಿಸಿರುವ ವಕೀಲರಿಗೆ ನೀಡುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ವಕೀಲ ರಾಮ್ ಜೇಠ್ಮಲಾನಿ, ನಾನು ಶ್ರೀಮಂತರಿಂದ ಹೆಚ್ಚು ಫೀ ಪಡೆಯುವ ವಿಚಾರ ಎಲ್ಲರಿಗೂ ಗೊತ್ತಿದೆ. ಒಂದೊಮ್ಮೆ ಸರ್ಕಾರ ನನ್ನ ಬಿಲ್ ಪಾವತಿಸದಿದ್ದರೆ ಕೇಜ್ರಿವಾಲ್`ಗೆ ಉಚಿತ ಸರ್ವಿಸ್ ನೀಡುವುದಾಗಿ ಹೇಳಿದ್ದಾರೆ. ಬಡ ಕಕ್ಷೀದಾರನೆಂದು ಪರಿಗಣಿಸಿ ಲೀಗಲ್ ಸರ್ವಿಸ್ ಒದಗಿಸುವುದಾಗಿ ಜೇಠ್ಮಲಾನಿ ಹೇಳಿದ್ದಾರೆ. ಅರುಣ್ ಜೇಟ್ಲಿ ಈ ವಿಷಯವನ್ನ ಪ್ರೇರೇಪಿಸಿದ್ದಾರೆ ಎಂದು ಜೇಠ್ಮಲಾನಿ ಆರೋಪಿಸಿದ್ದಾರೆ.

ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ಅರುಣ್ ಜೇಟ್ಲಿ ಮತ್ತವರ ಕುಟುಂಬ ಅಕ್ರಮ ಎಸಗಿದೆ ಎಂದು ಆರೋಪಿಸಿದ್ದ ಅರವಿಂದ್ ಕೇಜ್ರಿವಾಲ್, ರಾಘವ್ ಚಡ್ಡಾ, ಕುಮಾರ್ ವಿಶ್ವಾಸ್, ಅಶುತೊಷ್, ಸಂಜಯ್ ಸಿಂಗ್, ದೀಪಕ್ ಬಜಪಾಯ್ ವಿರುದ್ಧ ಅರುಣ್ ಜೇಟ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ, 10 ಕೋಟಿ ಪರಿಹಾರದ ಬೇಡಿಕೆ ಇಟ್ಟಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments