Webdunia - Bharat's app for daily news and videos

Install App

ದೆಹಲಿಯ ವೃದ್ಧರಿಗೆ ಉಚಿತ ಚಿಕಿತ್ಸೆ: ಹೊಸ ಯೋಜನೆ ಘೋಷಿಸಿದ ಅರವಿಂದ್ ಕೇಜ್ರಿವಾಲ್

Sampriya
ಬುಧವಾರ, 18 ಡಿಸೆಂಬರ್ 2024 (16:25 IST)
Photo Courtesy X
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 'ಸಂಜೀವನಿ ಯೋಜನೆ'ಯನ್ನು ಪ್ರಾರಂಭಿಸುವುದಾಗಿ ಬುಧವಾರ ಘೋಷಿಸಿದ್ದಾರೆ, ಇದು ವೃದ್ಧರಿಗೆ ಉಚಿತ ಚಿಕಿತ್ಸೆ ನೀಡುವ ಗುರಿಯನ್ನು ಹೊಂದಿದೆ. ದೆಹಲಿಯ 60 ವರ್ಷ ಮೇಲ್ಪಟ್ಟವರು  ಯೋಜನೆಯ ಪ್ರಯೋಜನವನ್ನು ಪಡೆಯಬಹುದು..

ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಕೇಜ್ರಿವಾಲ್, " ವಯಸ್ಸು ಹೆಚ್ಚಾದಂತೆ, ಹಲವಾರು ರೋಗಗಳು ವ್ಯಕ್ತಿಯನ್ನು ಬಾಧಿಸುತ್ತದೆ, ಚಿಕಿತ್ಸೆ ಹೇಗೆ ಪಡೆಯುವುದು ಎಂಬುದು ದೊಡ್ಡ ಚಿಂತೆ. ಉತ್ತಮ ಕುಟುಂಬದಿಂದ ಬಂದವರ ಬಗ್ಗೆ ನನಗೂ ತಿಳಿದಿದೆ, ಆದರೆ ಅವರ ಮಕ್ಕಳು ವೃದ್ಧಾಪ್ಯದಲ್ಲಿ ಅವರನ್ನು ನೋಡಿಕೊಳ್ಳುವುದಿಲ್ಲ, ಅವರ ಮಕ್ಕಳು ಅವರನ್ನು ತೊರೆದುಹೋದರು ಎಂಬಂತೆ ನರಳುತ್ತಿರುವುದನ್ನು ನಾನು ನೋಡಿದ್ದೇನೆ.

ಮಾತು ಮುಂದುವರಿಸಿದ ಅವರು, ಇಂದು ದೆಹಲಿಯ ವೃದ್ಧರಿಗಾಗಿ ಸಂಜೀವನಿ ಯೋಜನೆ ಘೋಷಣೆ ಮಾಡಲಿದ್ದೇನೆ, 60 ವರ್ಷ ಮೇಲ್ಪಟ್ಟ ನಮ್ಮ ಹಿರಿಯರಿಗೆ ಉಚಿತ ಚಿಕಿತ್ಸೆ ಸಿಗಲಿದೆ, ಚುನಾವಣೆ ನಂತರ ಈ ಯೋಜನೆ ತಂದು ಪಾಸು ಮಾಡುತ್ತೇವೆ.

ಈ ಯೋಜನೆಯು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಒದಗಿಸುತ್ತದೆ ಎಂದು ಕೇಜ್ರಿವಾಲ್ ವಿವರಿಸಿದರು. ಯಾರು ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಯಸುತ್ತಾರೆ, ಅವರ ಸಂಪೂರ್ಣ ಚಿಕಿತ್ಸೆಯು ಉಚಿತವಾಗಿರುತ್ತದೆ, ಯಾವುದೇ ಮಿತಿಗಳಿಲ್ಲ; ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತದೆ, ಶ್ರೀಮಂತರಾಗಿರಲಿ ಅಥವಾ ಬಡವರಾಗಿರಲಿ, ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ," ಅವರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments