Webdunia - Bharat's app for daily news and videos

Install App

ಚಪ್ಪಲಿ ವ್ಯಾಪಾರ ಮಾಡುತ್ತಿರುವ ಪಾಕಿಸ್ತಾನದ ಕ್ರಿಕೆಟ್‌ ಅಂಪೈರ್‌ ಅಸಾದ್‌ ರೌಫ್!

Webdunia
ಶುಕ್ರವಾರ, 24 ಜೂನ್ 2022 (16:21 IST)
ನೂರಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ಆಗಿದ್ದ ಪಾಕಿಸ್ತಾನದ ಅಸಾದ್ ರೌಫ್ ಲಾಹೋರ್‌ನ ಲಾಂಡಾ ಬಜಾರ್‌ನಲ್ಲಿ ಚಪ್ಪಲಿ, ಬಟ್ಟೆ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿರುವ ಬಗ್ಗೆ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ರೌಫ್ ಅಂತಾರಾಷ್ಟ್ರೀಯ ಪಂದ್ಯಗಳ ಅಂಪೈರ್ ಅಲ್ಲದೇ ಐಪಿಎಲ್‍ನಲ್ಲೂ ಕೂಡ ಅಂಪೈರ್ ಆಗಿ ಕೆಲಸ ನಿರ್ವಹಿಸಿದ್ದರು. ಆದರೆ ಸುಮ್ಮನೆ ಅಂಪೈರಿಂಗ್ ಮಾಡುತ್ತಿದ್ದರೇ ಅಸಾದ್ ರೌಫ್‍ಗೆ ಇದೀಗ ಈ ಪರಿಸ್ಥಿತಿ ಬರುತ್ತಿರಲಿಲ್ಲ. ರೌಫ್ 2013ರ ಐಪಿಎಲ್‍ನಲ್ಲಿ ಬುಕ್ಕಿಗಳೊಂದಿಗೆ ಸಂಪರ್ಕಿಸಿ ದುಬಾರಿ ಉಡುಗೊರೆ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಬಳಿಕ ವಿಚಾರಣೆ ನಡೆಸಿದ ಐಸಿಸಿಯ ಶಿಸ್ತು ಸಮಿತಿ ಆರೋಪ ಸಾಬೀತಾದ ಬಳಿಕ ರೌಫ್‍ರನ್ನು 2016ರ ನಂತರ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಪಂದ್ಯಗಳ ಅಂಪೈರಿಂಗ್‍ಗೆ ನಿಷೇಧ ಹೇರಿತ್ತು. ಈ ಮೂಲಕ ಅಸಾದ್ ರೌಫ್ ಅಂಪೈರ್ ವೃತ್ತಿ ಅಂತ್ಯ ಕಂಡಿತು.
ಈ ಮೊದಲು ಮುಂಬೈ ಮೂಲದ ಮಾಡೆಲ್‍ಗೆ ಲೈಂಗಿಕ ಕಿರುಕುಳ ನೀಡಿ ಮದುವೆ ಆಗುವುದಾಗಿ ಮೋಸ ಮಾಡಿದ್ದಾರೆ ಎಂಬ ಆರೋಪ ಕೂಡ ರೌಫ್ ಮೇಲೆ ಕೇಳಿಬಂದಿತ್ತು. ರೌಫ್‌ ಈ ಆರೋಪ ಸುಳ್ಳು ಎಂದು ಅಲ್ಲಗಳೆದಿದ್ದರು.
ಅಸಾದ್ ರೌಫ್ 2000 ರಿಂದ 2013 ರವರೆಗೆ 49 ಟೆಸ್ಟ್, 98 ಏಕದಿನ ಪಂದ್ಯ ಮತ್ತು 23 ಟಿ20 ಪಂದ್ಯಗಳು ಸೇರಿ ಒಟ್ಟು 170 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಅಂಪೈರ್ ವೃತ್ತಿ ತೊರೆದು ಲಾಹೋರ್‌ನ ಲಾಂಡಾ ಬಜಾರ್‌ನಲ್ಲಿ ಅಂಗಡಿಯನ್ನು ತೆರೆದು ಬಟ್ಟೆ, ಚಪ್ಪಲಿ, ಶೂ ವ್ಯಾಪಾರ ಮಾಡುತ್ತಿದ್ದಾರೆ.
ಲಾಹೋರ್‌ನಲ್ಲಿ ಲಾಂಡಾ ಬಜಾರ್ ಕಡಿಮೆ ಬೆಲೆಗೆ ಬಟ್ಟೆ, ಚಪ್ಪಲಿಗಳು ಮತ್ತು ಇತರ ಸರಕುಗಳು ಸಿಗುವ ಸ್ಥಳವಾಗಿದೆ. ಲಾಂಡಾ ಬಜಾರ್‌ನಲ್ಲಿರುವ ಕೆಲವು ಅಂಗಡಿಗಳು ಸೆಕೆಂಡ್ ಹ್ಯಾಂಡ್ ಸರಕುಗಳ ಮಾರಾಟಕ್ಕೆ ಪ್ರಸಿದ್ಧಿ ಪಡೆದಿದೆ. ಇದೀಗ ಈ ಸ್ಥಲದಲ್ಲಿ ಅಸಾದ್ ರೌಫ್ ಬಟ್ಟೆ, ಚಪ್ಪಳಿ, ಶೂಗಳನ್ನು ಮಾರಾಟ ಮಾಡುವ ಅಂಗಡಿ ಇಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ