Publish Date: Sun, 02 Oct 2022 (10:30 IST)
Updated Date: Sun, 02 Oct 2022 (10:42 IST)
ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಜ್ ಘಾಟ್ ನಲ್ಲಿರುವ ಮಹಾತ್ಮನ ಸಮಾಧಿಗೆ ತೆರಳಿ ನಮನ ಸಲ್ಲಿಸಿದ್ದಾರೆ.
ದೇಶದಾದ್ಯಂತ ಇಂದು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಗಾಂಧೀಜಿಯ ತತ್ವ ಆದರ್ಶಗಳಿಗೆ ತಕ್ಕಂತೆ ಹಲವೆಡೆ ಸ್ವಚ್ಛತಾ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.
ಮಹಾತ್ಮಾ ಗಾಂಧೀಜಿಯವರ 153 ನೇ ಜನ್ಮ ಜಯಂತಿ ಇದಾಗಿದ್ದು, ರಾಜ್ ಘಾಟ್ ನಲ್ಲಿ ನಮನ ಸಲ್ಲಿಸಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿ ಬಾಪು ಆದರ್ಶಗಳನ್ನು ಪಾಲಿಸುವ ಮೂಲಕ, ಹೆಚ್ಚು ಖಾದಿ ವಸ್ತುಗಳನ್ನು ಉಪಯೋಗಿಸೋಣ ಎಂದು ಕರೆ ನೀಡಿದ್ದಾರೆ.