Webdunia - Bharat's app for daily news and videos

Install App

ಮೈ ನಡುಗಿಸುವ ಸಾಮೂಹಿಕ ಅತ್ಯಾಚಾರ: ಬೆಚ್ಚಿಬಿದ್ದ ಆಂಧ್ರ

Webdunia
ಗುರುವಾರ, 23 ಜೂನ್ 2016 (10:46 IST)
ಅನಂತಪುರದಲ್ಲಿ ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ಅನೇಕ ದಿನಗಳಿಂದ ನಡೆಯುತ್ತಿರುವ ಸಾಮೂಹಿಕ ಅತ್ಯಾಚಾರದ ಕಥೆಯೊಂದು ಮೈ ನಡುಗಿಸುವಂತಿದ್ದು ಘಟನೆಯಿಂದ ಸಂಪೂರ್ಣ ಆಂಧ್ರವೇ ಬೆಚ್ಚಿ ಬಿದ್ದಿದೆ. 
 
ಕಲ್ಯಾಣದುರ್ಗದ ನಿವಾಸಿಯಾದ 17 ವರ್ಷದ ವಿದ್ಯಾರ್ಥಿ ಅನಂತಪುರದಲ್ಲಿ ಪಿಯುಸಿ ಓದುತ್ತಿದ್ದು ತನ್ನ ಮೇಲೆ ನಡೆದ ಸ್ನೇಹದ ಹೆಸರಲ್ಲಿ ತನ್ನ ಮೇಲೆ ನಡೆಸಿದ ಭಯಂಕರ ಕ್ರೂರ ಕೃತ್ಯವನ್ನು ಕೊನೆಗೂ ಪೊಲೀಸರ ಮುಂದೆ ಹೊರಹಾಕಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 
 
ಕಲ್ಯಾಣದುರ್ಗದಿಂದ ಅನಂತಪುರಕ್ಕೆ ಕಾಲೇಜಿಗೆ ಹೋಗುತ್ತಿದ್ದ ಬಾಲಕಿಯ ಸ್ನೇಹ ಸಂಪಾದಿಸಿದ ಅಮರನಾಥ್ ರೆಡ್ಡಿ, ಕಾರ್ತಿಕ್ ರೆಡ್ಡಿ ಎಂಬ ಇಬ್ಬರ ಸ್ನೇಹಿತರು ಸ್ವಲ್ಪ ದಿನಗಳಾದ ಬಳಿಕ ಪಿಕ್‌ನಿಕ್ ನೆಪದಲ್ಲಿ ಆಕೆಯನ್ನು ಅಜ್ಞಾತ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಕೀಚಕ ಕೃತ್ಯದ ವಿಡಿಯೋ ಚಿತ್ರೀಕರಿಸಿಕೊಂಡು ಅದನ್ನು ತೋರಿಸಿ ತಮ್ಮ ಇತರ ಸ್ನೇಹಿತರ ಜತೆ ಸೇರಿಕೊಂಡು ಪದೇ ಪದೇ ಬಾಲಕಿಯ  ಮೇಲೆ ಅತ್ಯಾಚಾರವೆಸಗಿದ್ದಾರೆ. 
 
ಮಾನಮರ್ಯಾದೆಗೆ ಹೆದರಿ ತನ್ನ ಮೇಲೆ ನಡೆಯುತ್ತಿದ್ದ ಅಸಹನೀಯ ದೌರ್ಜನ್ಯವನ್ನು ಯಾರ ಬಳಿ ಬಾಯ್ಬಿಡದ ಬಾಲಕಿ ಅವರ ಕಾಟ ತಾಳಲಾರದಾದಾಗ ದಾರಿ ಕಾಣದೆ ತನ್ನ ಪೋಷಕರ ಬಳಿ ಎಲ್ಲ ವಿಷಯವನ್ನು ಹೇಳಿಕೊಂಡಿದ್ದಾಳೆ. ಬಳಿಕ ತಂದೆ-ತಾಯಿಗಳ ಜತೆ ಸೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಳಾದ ಅಮರನಾಥ್ ರೆಡ್ಡಿ, ಕಾರ್ತಿಕ್ ರೆಡ್ಡಿಯನ್ನು ಬಂಧಿಸಿದ್ದಾರೆ. ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
 
ಈ ಕೃತ್ಯ ಸಂಪೂರ್ಣ ಆಂಧ್ರವನ್ನು ಆಘಾತಕ್ಕೆ ದೂಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಂಧ್ರ ಸರ್ಕಾರ ಬಾಲಕಿಗೆ 1 ಲಕ್ಷ ಪರಿಹಾರವನ್ನು ಘೋಷಿಸಿದೆ. ಆಕೆಯ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಭರವಸೆ ನೀಡಿರುವ ಸರ್ಕಾರ ಆಕೆ ಬಯಸಿದರೆ ಬೇರೆ ಕಾಲೇಜಿನಲ್ಲಿ ಪ್ರವೇಶ ಕೊಡಿಸುವ ವಾಗ್ದಾನ ಮಾಡಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನ ಭಾರೀ ಮಳೆ, ಕರಾವಳಿಗೆ ಇಂದೂ ಮಳೆಯಿರುತ್ತಾ ನೋಡಿ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಮುಂದಿನ ಸುದ್ದಿ
Show comments