Webdunia - Bharat's app for daily news and videos

Install App

ರೈಲಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್

Webdunia
ಭಾನುವಾರ, 10 ಅಕ್ಟೋಬರ್ 2021 (14:51 IST)
ಇತ್ತೀಚೆಗೆ ದೇಶದಲ್ಲಿ ನಿಮಿಷಕ್ಕೊಂದು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಷ್ಟರ ಮಟ್ಟಿಗೆ ಕಾಮಪಿಶಾಚಿಗಳು ತಮ್ಮ ಕ್ರೌರ್ಯ ಮೆರೆಯುತ್ತಿದ್ದಾರೆ.

ಗಾಂಧೀಜಿ ರಾತ್ರಿ 12 ಗಂಟೆಗೆ ಮಹಿಳೆ ಒಬ್ಬಂಟಿಯಾಗಿ ಹೊರಬಂದ ದಿನ ಸ್ವಾತಂತ್ಯ ಸಿಗುತ್ತೆ ಅಂತ ಹೇಳಿದ್ದಾರೆ. ರಾತ್ರಿ ಇರಲಿ, ಹಗಲಿನಲ್ಲೂ ಕಾಮಪಿಶಾಚಿಗಳು ಸಿಕ್ಕ ಸಿಕ್ಕವರ ಮೇಲೆ ಎರಗಿ ಬೀಳುತ್ತಿದ್ದಾರೆ. ಜನನಿಬಿಡ ಪ್ರದೇಶಗಳಲ್ಲೇ ಗ್ಯಾಂಗ್ ರೇಪ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿಂದೆ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಗ್ಯಾಂಗ್ ರೇಪ್ ಎಂಬ ಸುದ್ದಿಯನ್ನ ನಾವು ನೋಡಿದ್ದೆವು. ಆದರೆ ಈಗ ಕಂಡ ಕಂಡಲ್ಲಿ ಕಾಮಾಂಧರು ಕಚ್ಛೆ ಬಿಚ್ಚುತ್ತಾ ತಮ್ಮ ಕಾಮದಾಹವನ್ನು ತೀರಿಸಿಕೊಳ್ಳುತ್ತಿದ್ದಾರೆ. ಇದೀಗ ಚಲಿಸುತ್ತಿರುವ ರೈಲಿನಲ್ಲಿ ದರೋಡೆ ಹಾಗೂ 20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿ ಶುಕ್ರವಾರ ರಾತ್ರಿ 8 ಗಂಟೆಗೆ ಈ ದುರ್ಘಟನೆ ನಡೆದಿದೆ. ಇಗತ್ಪುರಿ - ಕಾಸ್ರಾ ನಿಲ್ದಾಣದ ನಡುವೆ 8 ದರೋಡೆಕೋರರು ರೈಲಿನ ಪ್ರಯಾಣಿಕರನ್ನ ಲೂಟಿ ಮಾಡಿದ್ದಾರೆ. ಇದೇ ವೇಳೆ ಅಲ್ಲೇ ಇದ್ದ 20 ವರ್ಷದ ಯುವತಿ ಮೇಲೆ ಕಿರಾತಕರು ಎರಗಿಬಿದ್ದಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈವರೆಗೂ 4 ದುಷ್ಕರ್ಮಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ನಾಲ್ವರು ಕಾಮಪಿಶಾಚಿಗಳ ಬೇಟೆಗೆ ಬಲೆ ಬೀಸಿದ್ದಾರೆ. ಈ ರೈಲು ಇಗತ್ಪುರಿ ನಿಲ್ದಾಣದಿಂದ ಮುಂಬೈ ಕಡೆ ಹೋಗುವಾಗ, ಸುರಂಗವೊಂದು ಸಿಗುತ್ತೆ. ಈ ವೇಳೆ ರೈಲಿನ ವೇಗ ಕಡಿಮೆಯಾಗುತ್ತೆ. ಇದೇ ಟೈಮ್ನಲ್ಲಿ ದರೋಡೆಕೋರರು ರೈಲು ಹತ್ತಿದ್ದಾರೆ ಅಂತ ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments