Webdunia - Bharat's app for daily news and videos

Install App

ರೈಲಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್

Webdunia
ಭಾನುವಾರ, 10 ಅಕ್ಟೋಬರ್ 2021 (14:51 IST)
ಇತ್ತೀಚೆಗೆ ದೇಶದಲ್ಲಿ ನಿಮಿಷಕ್ಕೊಂದು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಷ್ಟರ ಮಟ್ಟಿಗೆ ಕಾಮಪಿಶಾಚಿಗಳು ತಮ್ಮ ಕ್ರೌರ್ಯ ಮೆರೆಯುತ್ತಿದ್ದಾರೆ.

ಗಾಂಧೀಜಿ ರಾತ್ರಿ 12 ಗಂಟೆಗೆ ಮಹಿಳೆ ಒಬ್ಬಂಟಿಯಾಗಿ ಹೊರಬಂದ ದಿನ ಸ್ವಾತಂತ್ಯ ಸಿಗುತ್ತೆ ಅಂತ ಹೇಳಿದ್ದಾರೆ. ರಾತ್ರಿ ಇರಲಿ, ಹಗಲಿನಲ್ಲೂ ಕಾಮಪಿಶಾಚಿಗಳು ಸಿಕ್ಕ ಸಿಕ್ಕವರ ಮೇಲೆ ಎರಗಿ ಬೀಳುತ್ತಿದ್ದಾರೆ. ಜನನಿಬಿಡ ಪ್ರದೇಶಗಳಲ್ಲೇ ಗ್ಯಾಂಗ್ ರೇಪ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿಂದೆ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಗ್ಯಾಂಗ್ ರೇಪ್ ಎಂಬ ಸುದ್ದಿಯನ್ನ ನಾವು ನೋಡಿದ್ದೆವು. ಆದರೆ ಈಗ ಕಂಡ ಕಂಡಲ್ಲಿ ಕಾಮಾಂಧರು ಕಚ್ಛೆ ಬಿಚ್ಚುತ್ತಾ ತಮ್ಮ ಕಾಮದಾಹವನ್ನು ತೀರಿಸಿಕೊಳ್ಳುತ್ತಿದ್ದಾರೆ. ಇದೀಗ ಚಲಿಸುತ್ತಿರುವ ರೈಲಿನಲ್ಲಿ ದರೋಡೆ ಹಾಗೂ 20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿ ಶುಕ್ರವಾರ ರಾತ್ರಿ 8 ಗಂಟೆಗೆ ಈ ದುರ್ಘಟನೆ ನಡೆದಿದೆ. ಇಗತ್ಪುರಿ - ಕಾಸ್ರಾ ನಿಲ್ದಾಣದ ನಡುವೆ 8 ದರೋಡೆಕೋರರು ರೈಲಿನ ಪ್ರಯಾಣಿಕರನ್ನ ಲೂಟಿ ಮಾಡಿದ್ದಾರೆ. ಇದೇ ವೇಳೆ ಅಲ್ಲೇ ಇದ್ದ 20 ವರ್ಷದ ಯುವತಿ ಮೇಲೆ ಕಿರಾತಕರು ಎರಗಿಬಿದ್ದಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈವರೆಗೂ 4 ದುಷ್ಕರ್ಮಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ನಾಲ್ವರು ಕಾಮಪಿಶಾಚಿಗಳ ಬೇಟೆಗೆ ಬಲೆ ಬೀಸಿದ್ದಾರೆ. ಈ ರೈಲು ಇಗತ್ಪುರಿ ನಿಲ್ದಾಣದಿಂದ ಮುಂಬೈ ಕಡೆ ಹೋಗುವಾಗ, ಸುರಂಗವೊಂದು ಸಿಗುತ್ತೆ. ಈ ವೇಳೆ ರೈಲಿನ ವೇಗ ಕಡಿಮೆಯಾಗುತ್ತೆ. ಇದೇ ಟೈಮ್ನಲ್ಲಿ ದರೋಡೆಕೋರರು ರೈಲು ಹತ್ತಿದ್ದಾರೆ ಅಂತ ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments