ಸ್ನೇಹಿತನ ಭೇಟಿಗೆ ತೆರಳಿದ್ದ ಯುವತಿಯ ಮೇಲೆ ಗ್ಯಾಂಗ್‌ರೇಪ್

Webdunia
ಶುಕ್ರವಾರ, 10 ನವೆಂಬರ್ 2023 (09:07 IST)
ಭೋಜ್ಪುರ್ ಜಿಲ್ಲೆಯ ನಿವಾಸಿಯಾದ ಯುವತಿ ಮಹಾದಲಿತ ಸಮುದಾಯಕ್ಕೆ ಸೇರಿದಳಾಗಿದ್ದು, ಪರೀಕ್ಷೆಗಾಗಿ ತಯಾರಿ ನಡೆಸಲು ಬಿಹ್ತಾದಲ್ಲಿನ ತನ್ನ ಸಂಬಂಧಿಕರ ಮನೆಗೆ ಬಂದಿದ್ದಳು. ಗೆಳೆಯನ ಭೇಟಿಗಾಗಿ ಹೊರಗಡೆ ಬಂದ ಸಂದರ್ಭದಲ್ಲಿ ಆಕೆಯ ಮೇಲೆ 6 ಜನರು ಗ್ಯಾಂಗ್‌ರೇಪ್ ನಡೆಸಿದ ಘಟನೆ ವರದಿಯಾಗಿದೆ.
 
ಯುವತಿ  ಒಂದು ಸಣ್ಣ ಸೇತುವೆ ಬಳಿ ತನ್ನ ಗೆಳೆಯನನ್ನು ಭೇಟಿಯಾಗಲು ಹೋಗಿದ್ದಳು. ಆ ಸಮಯದಲ್ಲಿ ಅವರನ್ನು ಸುತ್ತುವರೆದ 6 ಜನ ಪುಂಡರ ಗುಂಪು, ಆಕೆಯನ್ನು ಹತ್ತಿರದ ಪೊದೆಯೊಂದರ ಬಳಿ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಉರುವಲು ಕಟ್ಟಿಗೆಗಳನ್ನು ಸಂಗ್ರಹಿಸಲು ಕಾಡಿಗೆ ಬಂದಿದ್ದ ಮಹಿಳೆಯೊಬ್ಬರಿಗೆ ಯುವತಿಯ ಕಿರುಚಾಟ ಕೇಳಿಸಿದೆ.  ಆಕೆ ಹಳ್ಳಿಯ ಜನರಿಗೆ ಈ ಕುರಿತು ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಹಳ್ಳಿಯ ಜನ ಕಟುಕರ ಕೈಯಿಂದ ಯುವತಿಯನ್ನು ಪಾರು ಮಾಡಿದ್ದಲ್ಲದೇ ಆರೋಪಿಗಳಲ್ಲಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆತನನ್ನು ದೀಪಕ್ ಕುಮಾರ್ ಎಂದು ಗುರುತಿಸಲಾಗಿದೆ. 
 
ಆತನನ್ನು ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು,  ಪರಾರಿಯಾಗಿರುವ ಇಬ್ಬರನ್ನು ಸೆರೆ ಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪಾಟ್ಣಾದ ಹಿರಿಯ ಪೊಲೀಸ್ ಅಧೀಕ್ಷಕರಾದ ಜಿತೇಂದ್ರ ರತ್ನಾ ತಿಳಿಸಿದ್ದಾರೆ. 
 
ಆರೋಪಿ ದೀಪಕ್ ನೀಡಿದ ಮಾಹಿತಿಗಳನ್ನಾದರಿಸಿ ಭುರಾ ಯಾದವ್, ರಾಮ್ಜೀ ರೈ, ಸೋನು ಕುಮಾರ್ ಎಂಬುವವರನ್ನು ಬಂಧಿಸಲಾಯಿತು. ಪರಾರಿಯಾಗಿರುವವರನ್ನು ಚುಂಚನ್ ಕುಮಾರ್ ಮತ್ತು ನಂದ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments