Webdunia - Bharat's app for daily news and videos

Install App

ಸ್ನೇಹಿತನ ಭೇಟಿಗೆ ತೆರಳಿದ್ದ ಯುವತಿಯ ಮೇಲೆ ಗ್ಯಾಂಗ್‌ರೇಪ್

Webdunia
ಶುಕ್ರವಾರ, 10 ನವೆಂಬರ್ 2023 (09:07 IST)
ಭೋಜ್ಪುರ್ ಜಿಲ್ಲೆಯ ನಿವಾಸಿಯಾದ ಯುವತಿ ಮಹಾದಲಿತ ಸಮುದಾಯಕ್ಕೆ ಸೇರಿದಳಾಗಿದ್ದು, ಪರೀಕ್ಷೆಗಾಗಿ ತಯಾರಿ ನಡೆಸಲು ಬಿಹ್ತಾದಲ್ಲಿನ ತನ್ನ ಸಂಬಂಧಿಕರ ಮನೆಗೆ ಬಂದಿದ್ದಳು. ಗೆಳೆಯನ ಭೇಟಿಗಾಗಿ ಹೊರಗಡೆ ಬಂದ ಸಂದರ್ಭದಲ್ಲಿ ಆಕೆಯ ಮೇಲೆ 6 ಜನರು ಗ್ಯಾಂಗ್‌ರೇಪ್ ನಡೆಸಿದ ಘಟನೆ ವರದಿಯಾಗಿದೆ.
 
ಯುವತಿ  ಒಂದು ಸಣ್ಣ ಸೇತುವೆ ಬಳಿ ತನ್ನ ಗೆಳೆಯನನ್ನು ಭೇಟಿಯಾಗಲು ಹೋಗಿದ್ದಳು. ಆ ಸಮಯದಲ್ಲಿ ಅವರನ್ನು ಸುತ್ತುವರೆದ 6 ಜನ ಪುಂಡರ ಗುಂಪು, ಆಕೆಯನ್ನು ಹತ್ತಿರದ ಪೊದೆಯೊಂದರ ಬಳಿ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಉರುವಲು ಕಟ್ಟಿಗೆಗಳನ್ನು ಸಂಗ್ರಹಿಸಲು ಕಾಡಿಗೆ ಬಂದಿದ್ದ ಮಹಿಳೆಯೊಬ್ಬರಿಗೆ ಯುವತಿಯ ಕಿರುಚಾಟ ಕೇಳಿಸಿದೆ.  ಆಕೆ ಹಳ್ಳಿಯ ಜನರಿಗೆ ಈ ಕುರಿತು ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಹಳ್ಳಿಯ ಜನ ಕಟುಕರ ಕೈಯಿಂದ ಯುವತಿಯನ್ನು ಪಾರು ಮಾಡಿದ್ದಲ್ಲದೇ ಆರೋಪಿಗಳಲ್ಲಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆತನನ್ನು ದೀಪಕ್ ಕುಮಾರ್ ಎಂದು ಗುರುತಿಸಲಾಗಿದೆ. 
 
ಆತನನ್ನು ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು,  ಪರಾರಿಯಾಗಿರುವ ಇಬ್ಬರನ್ನು ಸೆರೆ ಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪಾಟ್ಣಾದ ಹಿರಿಯ ಪೊಲೀಸ್ ಅಧೀಕ್ಷಕರಾದ ಜಿತೇಂದ್ರ ರತ್ನಾ ತಿಳಿಸಿದ್ದಾರೆ. 
 
ಆರೋಪಿ ದೀಪಕ್ ನೀಡಿದ ಮಾಹಿತಿಗಳನ್ನಾದರಿಸಿ ಭುರಾ ಯಾದವ್, ರಾಮ್ಜೀ ರೈ, ಸೋನು ಕುಮಾರ್ ಎಂಬುವವರನ್ನು ಬಂಧಿಸಲಾಯಿತು. ಪರಾರಿಯಾಗಿರುವವರನ್ನು ಚುಂಚನ್ ಕುಮಾರ್ ಮತ್ತು ನಂದ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments