Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಹಿನ್ನೆಲೆ: ಅ.5ರಂದು ನವದೆಹಲಿಯಲ್ಲಿ ಪ್ರತಿಭಟನೆ

Webdunia
ಮಂಗಳವಾರ, 26 ಸೆಪ್ಟಂಬರ್ 2017 (00:13 IST)
ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಅಕ್ಟೋಬರ್ 5ಕ್ಕೆ ಒಂದು ತಿಂಗಲೂ ಪೂರ್ಣವಾಗಲಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಸಾಮಾಜಿಕ ಹೋರಾಟಗಾರ ಜಿಗ್ನೇಶ್ ಮೇವಾನಿ ತಿಳಿಸಿದ್ದಾರೆ.

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅ.5ಕ್ಕೆ ಗೌರಿ ಹತ್ಯೆಯಾಗಿ ಒಂದು ತಿಂಗಳು ಪೂರ್ಣವಾಗಲಿದೆ. ಆದರೆ ಘಟನೆ ನಡೆದು ತಿಂಗಳಾದರೂ ಸಹ ಆರೋಪಿಗಳ ಬಂಧನವಾಗಿಲ್ಲ. ಪನ್ಸಾರೆ, ಕಲ್ಬುರ್ಗಿ ಕೊಂದ ಹಂತಕರನ್ನು ಬಂಧಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಈ ನಿಟ್ಟಿನಲ್ಲಿ ಸಾಮಾಜಿಕ ಹೋರಾಟಗಾರರು ಮತ್ತು ಪ್ರಗತಿಪರರು ದೆಹಲಿಯ ಮಂಡಿಹೌಸ್ ನಿಂದ ಜಂತರ್ ಮಂತರ್ ವರೆಗೂ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ತಿಳಿಸಿದ್ದಾರೆ.

ಹತ್ಯೆಯನ್ನು ಸಂಭ್ರಮಿಸುವರನ್ನ ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿದ್ದಾರೆ. ಗೌರಿ ಹತ್ಯೆಯ ಬಗ್ಗೆ ಪ್ರಧಾನಿ ಒಂದು ಪದವನ್ನೂ ಮಾತನಾಡಿಲ್ಲ. ಈ ಮೌನ ಹತ್ಯೆಯನ್ನು ಸಮರ್ಥಿಸುವಂತಿದೆ ಎಂದು ಪ್ರಧಾನಿ ವಿರುದ್ಧ ಸಾಮಾಜಿಕ ಹೋರಾಟಗಾರ ಜಿಗ್ನೇಶ್ ಮೇವಾನಿ ವಾಗ್ದಾಳಿ ನಡೆಸಿದರು.

ಇದೇ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರರಾದ ಯೋಗೇಂದ್ರ ಯಾದವ್, ಡಾ.ವಾಸು ಉಪಸ್ಥಿತರಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments