Webdunia - Bharat's app for daily news and videos

Install App

ಕೋವಿಡ್ ಲಸಿಕೆ ಪಡೆಯಿರಿ ಬಂಪರ್ ಬಹುಮಾನ ಗೆಲ್ಲಿ!

Webdunia
ಗುರುವಾರ, 2 ಡಿಸೆಂಬರ್ 2021 (17:35 IST)
ಮುಂಬೈ : ಕೋವಿಡ್ ನಾನಾ ರೂಪಾಂತರಗಳೊಂದಿಗೆ ಜಾಗತಿಕವಾಗಿ ಆತಂಕ ಮೂಡಿಸಿದೆ.
ಕೋವಿಡ್ ವಿರುದ್ಧದ ಹೋರಾಟಕ್ಕೆ ಲಸಿಕೆ ಪಡೆಯುವಂತೆ ಸಾಕಷ್ಟು ಅರಿವು ಮೂಡಿಸಿದರು ಎಷ್ಟೋ ಮಂದಿ ಈವರೆಗೂ ಲಸಿಕೆ ಹಾಕಿಸಿಕೊಂಡಿಲ್ಲ. ಇದರಿಂದ ಬೇಸತ್ತಿರುವ ಮಹಾರಾಷ್ಟ್ರದ ಹಿಂಗೋಲಿ ಪುರಸಭೆ ವಿನೂತನ ಕಾರ್ಯಕ್ರಮ ಜಾರಿಗೆ ಮುಂದಾಗಿದೆ.
ಹಿಂಗೋಲಿ ಜಿಲ್ಲೆಯಲ್ಲಿ ಈವರೆಗೆ ಶೇ. 70 ರಷ್ಟು ಮಂದಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಈ ಪೈಕಿ ಶೇ. 56 ರಷ್ಟು ಮಂದಿ ಎರಡೂ ಡೋಸ್ಗಳನ್ನು ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗ ವಿಶ್ವದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರ ಓಮಿಕ್ರಾನ್ ಭೀತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ಹಿಂಗೋಲಿ ಜಿಲ್ಲಾಧಿಕಾರಿ ಜಿತೇಂದ್ರ ಪಾಪಲ್ಕರ್ ಅವರು ಅಧಿಕಾರಿಗಳ ತುರ್ತು ಸಭೆ ಕರೆದು, ಜನರು ಲಸಿಕೆ ಪಡೆದುಕೊಳ್ಳುವಂತೆ ಉತ್ತೇಜಿಸಲು ಸೂಕ್ತ ಬಹುಮಾನ ನೀಡುವ ವಿಷಯವನ್ನು ಚರ್ಚಿಸಿದ್ದಾರೆ.
 ಈ ಹಿನ್ನೆಲೆಯಲ್ಲಿ ಪುರಸಭೆಯ ಅಧಿಕಾರಿ ಡಾ. ಅಜಯ್ ಕುರ್ವಾಡೆ ಅವರು, ಲಕ್ಕಿ ಡ್ರಾ ಆಯೋಜನೆಯ ಉಪಾಯ ಮಾಡಿದ್ದಾರೆ. ಡಿ.27ರಂದು ಲಕ್ಕಿ ಡ್ರಾ ನಡೆಯಲಿದ್ದು, ಡಿ.2ರಿಂದ 24ರ ನಡುವೆ ಲಸಿಕೆ ಪಡೆದವರಿಗೆ ಲಕ್ಕಿ ಡ್ರಾ ಟಿಕೆಟ್ ಸಿಗಲಿದೆ ಎಂದು ತಿಳಿಸಿದ್ದಾರೆ.
ಹಿಂಗೋಲಿ ಜಿಲ್ಲೆಯಲ್ಲಿ ಈವರೆಗೆ ಕೋವಿಡ್ ದೃಢಪಟ್ಟ 16,059 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 395 ಮಂದಿ ಮೃತಪಟ್ಟಿದ್ದಾರೆ. 15,659 ಮಂದಿ ಗುಣಮುಖರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments