Webdunia - Bharat's app for daily news and videos

Install App

ಸಂಪೂರ್ಣ ಆರ್‌ಜೆಡಿ ಕುಲಕ್ಕೆ ಹುಚ್ಚು ಹಿಡಿದಿದೆ: ಬಿಜೆಪಿ

Webdunia
ಶನಿವಾರ, 10 ಅಕ್ಟೋಬರ್ 2015 (11:38 IST)
ಬಿಹಾರದಲ್ಲೀಗ ಗೋಮಾಂಸದ ರಾಜಕೀಯ ಸುರುವಾಗಿದೆ. ಬಿಜೆಪಿ ಮತ್ತು ಆರ್‌ಜೆಡಿ ಪಕ್ಷಗಳು ಗೋಮಾಂಸ ವಿಷಯವನ್ನಿಟ್ಟುಕೊಂಡು ರಾಜಕೀಯದಾಟವನ್ನು ಆಡುತ್ತಿದ್ದು ದಿನೇ ಪ್ರತಿದಿನ ಈ ಕುರಿತೇ ಹೇಳಿಕೆ, ವಾದ- ಪ್ರತಿವಾದಗಳು ಹೆಚ್ಚುತ್ತಿವೆ. ಕಳೆದ ವಾರ ಆರ್‌ಜೆಡಿ ವರಿಷ್ಠ ಲಾಲು  ಹಿಂದೂಗಳು ಮತ್ತು ವಿದೇಶದಲ್ಲಿರುವ ಭಾರತೀಯರೂ ಗೋಮಾಂಸ ಸೇವನೆ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ವ್ಯಾಪಕ ವಿರೋಧ, ಖಂಡನೆ ವ್ಯಕ್ತವಾಗಿತ್ತು.


 
ಈಗ ಅದೇ ಪಕ್ಷದ ನಾಯಕ ರಘುವಂಶ ಪ್ರಸಾದ್ ಸಹ 'ವೇದಗಳ ಕಾಲದಲ್ಲಿ ಗೋಮಾಂಸ ಸೇವಿಸಲಾಗುತ್ತಿತ್ತು. ಋಷಿಮುನಿಗಳು ಸಹ ಗೋಮಾಂಸವನ್ನು ಭಕ್ಷಿಸುತ್ತಿದ್ದರು', ಎಂದು ಹೇಳುವುದರ ಮೂಲಕ ಬಿಜೆಪಿ ನಾಯಕರನ್ನು ಕೆಣಕಿದ್ದಾರೆ. 
 
ಇದಕ್ಕೆ ಆಕ್ರೋಶ ವ್ಯಕ್ತ ಪಡಿಸಿರುವ ಬಿಜೆಪಿ ನಾಯಕ ಗಿರಿರಾಜ್ ಸಿಂಗ್, 'ಸಂಪೂರ್ಣ ಆರ್‌ಜೆಡಿ ವಂಶಕ್ಕೆ ಹುಚ್ಚು ಹಿಡಿದಿದೆ ಎನಿಸುತ್ತದೆ. ಅವರ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದೆ. ಇದು ನಮಗೆ ಸಹಸಲಾಗುತ್ತಿಲ್ಲ. ಮತಗಳನ್ನು ಸೆಳೆಯಲು ಲಾಲು ಮತ್ತು ಅವರ ಪಕ್ಷದ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ', ಎಂದು ಗುಡುಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments