Webdunia - Bharat's app for daily news and videos

Install App

ಪ್ರೇಯಸಿಯನ್ನು ಸಜೀವವಾಗಿ ದಹಿಸಿ ಪ್ರಿಯಕರ ಎಸ್ಕೇಪ್

ramkrishna puranik
ಶುಕ್ರವಾರ, 22 ಡಿಸೆಂಬರ್ 2017 (17:23 IST)
ಪ್ರಿಯಕರನೊಬ್ಬ ಕೋಪದ ಭರದಲ್ಲಿ ಪ್ರೇಯಸಿಯ ಮೈಮೇಲೆ ಸೀಮೆಎಣ್ಣೆ ಸುರಿದು ಸಜೀವವಾಗಿ ದಹಿಸಿದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. 
25 ವರ್ಷದ ಯುವತಿಯ ಮೇಲೆ ಆರೋಪಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಲ್ಲಿನ ಗಾಂಧಿ ಜನರಲ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ.
 
 ಲಾಲಾಗುಡಾದ ನಿವಾಸಿಯಾಗಿರುವ ಮೃತಪಟ್ಟ ಸಂಧ್ಯಾ ರಾಣಿ, ರಸ್ತೆಯಲ್ಲಿ ನಡೆಯುತ್ತಿರುವಾಗ, ಆಕೆಯ ಪ್ರಿಯಕರ ಹಿಂಬದಿಯಿಂದ ಬಂದು ಆಕೆಯ ಮೇಲೆ ಸೀಮೆಎಣ್ಣೆಯನ್ನು ಸುರಿದ ನಂತರ ಬೆಂಕಿ ತಗುಲಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. 
 
ಸಂಧ್ಯಾ ಈ ಘಟನೆಯಲ್ಲಿ ಶೇಕಡಾ 70 ರಷ್ಟು ಸುಟ್ಟು ಹೋಗಿದ್ದಾಳೆ. ತನ್ನನ್ನು ಸುಟ್ಟಿದ್ದು ಕಾರ್ತಿಕ್ ಎಂಬುದಾಗಿ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಕಳೆದ ಕೆಲವು ದಿನಗಳಿಂದ ಕಾರ್ತಿಕ್ ತನಗೆ ಕಿರುಕುಳ ನೀಡುತ್ತಿರುವುದಾಗಿ ಅವಳು ತಿಳಿಸಿದ್ದಾಳೆ.
 
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕಾರ್ತಿಕ್, ಸಂಧ್ಯಾಳಿಗೆ ಪರಿಚಿತ ವ್ಯಕ್ತಿಯಾಗಿದ್ದು ಮತ್ತು ಅವಳು ಕೆಲಸ ಮಾಡುತ್ತಿದ್ದ ಅಲ್ಯೂಮಿನಿಯಂ ಆರ್ಟಿಕಲ್ಸ್ ಕಂಪನಿಯಲ್ಲೇ ಅವನು ಕೆಲಸ ಮಾಡುತ್ತಿದ್ದ ಎನ್ನುವ ಮಾಹಿತಿ ಲಿಭಿಸಿದೆ. 
 
ಮೃತ ಸಂಧ್ಯಾಳ ಹೇಳಿಕೆಯನ್ನು ಆಧರಿಸಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಹಿರಿಯ ಪೋಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments