Webdunia - Bharat's app for daily news and videos

Install App

ಬಾಲಕಿಗೆ ತಂದೆ, ಸಹೋದರನಿಂದ ನಿರಂತರ ರೇಪ್

Webdunia
ಶುಕ್ರವಾರ, 26 ಜುಲೈ 2019 (15:56 IST)
ಆಘಾತಕಾರಿ ಘಟನೆಯೊಂದರಲ್ಲಿ ಮಲತಾಯಿಯೊಬ್ಬಳು 15 ವರ್ಷದ ಪುತ್ರಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪದ ಮೇಲೆ ಬಂಧಿಸಲಾಗಿದೆ.
ಕುರ್ಲಾ ರೈಲು ನಿಲ್ದಾಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯೊಬ್ಬಳ ಬಗ್ಗೆ ಎನ್‌ಜಿಓಗೆ ಮಾಹಿತಿ ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ.
 
15 ವರ್ಷದ ಬಾಲಕಿಯನ್ನು ತಂದೆ ಮತ್ತು ಸಹೋದರ ಪ್ರತಿನಿತ್ಯ ಅತ್ಯಾಚಾರ ಮಾಡಿದ್ದಲ್ಲದೇ ಆಕೆಯ ದೇಹದ ತುಂಬೆಲ್ಲಾ ಸಿಗರೇಟಿನಿಂದ ಸುಟ್ಟ ಗಾಯಗಳು ಕಂಡು ಬಂದಿವೆ.
 
ಮಲತಾಯಿ ಕೂಡಾ ವೇಶ್ಯಾವಾಟಿಕೆಯಲ್ಲಿದ್ದು ತನ್ನನ್ನು ಕೂಡಾ ವೇಶ್ಯಾವಾಟಿಕೆ ನಡೆಸುವಂತೆ ಒತ್ತಡ ಹೇರುತ್ತಿದ್ದಳು. ತನ್ನ ತಂದೆ ಮತ್ತು ಸಹೋದರ ಕೂಡಾ ದಿನನಿತ್ಯ ರೇಪ್ ಎಸಗುತ್ತಿದ್ದರು ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.
 
ತಂದೆ ಮತ್ತು ಸಹೋದರನಿಂದ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿಗೆ ಯಾವುದೇ ನೆರವು ದೊರೆಯದ ಹಿನ್ನೆಲೆಯಲ್ಲಿ ಕುರ್ಲಾ ರೈಲು ನಿಲ್ದಾಣಕ್ಕೆ ಬಂದಿದ್ದಳು. ಆದರೆ, ಈರೋಗ್ಯ ಹದಗೆಟ್ಟಿದ್ದರಿಂದ ಅಲ್ಲಿಯೇ ಕುಸಿದು ಬಿದ್ದಿದ್ದಳು ಎನ್ನಲಾಗಿದೆ.
 
ರೈಲು ನಿಲ್ದಾಣದಲ್ಲಿದ್ದ ಪ್ರಯಾಣಿಕರು ಎನ್‌ಜಿಓ ಸಂಸ್ಥೆಗೆ ಕರೆ ಮಾಡಿದ್ದಾರೆ. ಕೂಡಲೇ ಅಲ್ಲಿಗೆ ಬಂದ ಎನ್‌ಜಿಓ ಸದಸ್ಯರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
 
ಪೊಲೀಸರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದು ವಿಚಾರಣೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments