ಕಳೆದ 2012 ರಲ್ಲಿ ದೆಹಲಿ ಗ್ಯಾಂಗ್ರೇಪ್ ಪ್ರಕರಣ ಹಸಿರಾಗಿರುವಂತೆಯೇ 19 ವರ್ಷದ ಯುವತಿಯ ಮೇಲೆ ನಾಲ್ವರು ಆರೋಪಿಗಳು ಗ್ಯಾಂಗ್ರೇಪ್ ಎಸಗಿದ್ದಲ್ಲದೇ ಆಕೆಗೆ ಮನಬಂದಂತೆ ಚಾಕುವಿನಿಂದ ಇರಿದು ಹೇಯ ಘಟನೆ ವರದಿಯಾಗಿದೆ.
ಯುವತಿಯ ಗುಪ್ತಾಂಗ ಸೇರಿದಂತೆ ದೇಹದ ತುಂಬಾ ಚಾಕುವಿನಿಂದ ಇರಿದ ಗಾಯಗಳಾಗಿದ್ದು, ಮಧುಬನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಯುವತಿ ಸಾವನ್ನಪ್ಪಿದ್ದಾಳೆ ಎಂದು ತಿಳಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಯುವತಿಗೆ ಪ್ರಜ್ಞೆ ಮರಳಿದ ನಂತರ ನೆರೆಹೊರೆಯವರ ನೆರವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಆಕೆಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಯುವತಿ ಪೊಲೀಸರಿಗೆ ದೂರು ನೀಡಿ, ನಾಲ್ವರು ಆರೋಪಿಗಳು ನನ್ನನ್ನು ಒತ್ತಾಯಪೂರ್ಕವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿ, ನಂತರ 16 ಬಾರಿ ಚಾಕುವಿನಿಂದ ಇರಿದಿದ್ದಾರೆ. ನಾನು ಮರಣ ಹೊಂದಿದ್ದೇನೆ ಎಂದು ತಿಳಿದು ಅರಣ್ಯ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾಳೆ.
ಯುವತಿಯ ಗುಪ್ತಾಂಗ ಸೇರಿದಂತೆ ದೇಹದ ತುಂಬಾ ಚಾಕುವಿನಿಂದ ಇರಿದ ಗಾಯಗಳಾಗಿದ್ದು, ಮಧುಬನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಪೊಲೀಸರು ಯುವತಿಯ ಮೇಲೆ ಅತ್ಯಾಚಾರ ನಡೆದ ಸ್ಥಳದಲ್ಲಿ ಎಟಿಎಂ ಕಾರ್ಡ್, ಮೊಬೈಲ್ ಮತ್ತು ಚಾಕು ದೊರೆತಿದೆ. ಮೊಬೈಲ್ ಕರೆಗಳ ಬೆನ್ನಟ್ಟಿದ ಪೊಲೀಸ ತಂಡ ಮೊಹಮ್ಮದ್ ಸುಲೇಮಾನ್ ಎನ್ನುವ ಆರೋಪಿಯನ್ನು ಬಂಧಿಸಿದೆ. ಇತರ ಮೂವರು ಆರೋಪಿಗಳಿಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವೆಬ್ದುನಿಯಾ ಮೊಬೈಲ್ ಆಪ್ (ಡೌನ್ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.