Select Your Language

Notifications

webdunia
webdunia
webdunia
webdunia

ನಾಯಿಗಳ ದಾಳಿಗೆ ಬಾಲಕ ಬಲಿ!

ನಾಯಿಗಳ ದಾಳಿಗೆ ಬಾಲಕ ಬಲಿ!
ಮುಂಬೈ , ಭಾನುವಾರ, 12 ಜೂನ್ 2022 (10:03 IST)
ಮುಂಬೈ : ಬೀದಿ ನಾಯಿಗಳ ದಾಳಿಯಿಂದಾಗಿ ಓರ್ವ ಪುಟ್ಟ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಟೋಲ್ ಪಟ್ಟಣದ ಧಂತೋಳಿ ಪ್ರದೇಶದಲ್ಲಿ ನಡೆದಿದೆ.

ವಿರಾಜ್ ರಾಜು ಜಯವರ್ (05) ನಾಯಿ ದಾಳಿಗೊಳಗಾಗಿ ಮೃತಪಟ್ಟಿರುವ ಬಾಲಕ. ತನ್ನ ಸಹೋದರಿಯೊಂದಿಗೆ ವಾಕಿಂಗ್ಗೆ ತೆರಳಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿವೆ.

ಈ ವೇಳೆ ಸಹೋದರಿ ನಾಯಿಗಳನ್ನು ಓಡಿಸಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ನಾಯಿಗಳು ವಿರಾಜ್ ರಾಜು ಜಯವರ್ ಮೇಲೆ ದಾಳಿ ಮಾಡಿವೆ ಎಂದು ತಿಳಿಸಿದ್ದಾರೆ.

ಘಟನೆ ಬಳಿಕ ಪೋಷಕರು ಮತ್ತು ದಾರಿಹೋಕರು ಸ್ಥಳಕ್ಕೆ ಧಾವಿಸಿ ರಕ್ತದ ಮಡುವಿನಿಂದ ಒದ್ದಾಡುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ವಿರಾಜ್ ರಾಜ್ ಜಯವರ್ ಸಾವನ್ನಪ್ಪಿದ್ದಾನೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಚ್ಚಿದಾನಂದ ಸ್ವಾಮೀಜಿಗೆ `ಯೋಗ ರತ್ನ’ ಪ್ರಶಸ್ತಿ ಪ್ರದಾನ