ಗೆಳತಿ ನೋಡಲು ಹೋದ ಪ್ರಿಯಕರ ಪ್ರಾಣ ಬಿಟ್ಟ! ಯಾಕೆ?

Webdunia
ಸೋಮವಾರ, 3 ಜನವರಿ 2022 (14:06 IST)
ಹೈದರಾಬಾದ್  : ಕೊರೊನಾ ಕಾರಣದಿಂದ ಗೆಳತಿಯನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ.

ನ್ಯೂ ಇಯರ್ಗೆ ಗೆಳತಿ ನೋಡಲು ಹೋಗಲು ಸಾಧ್ಯವಾಗದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.

ವಿನೀತ್(22) ಮೃತ ಯುವಕ. ಈತ ಉತ್ತರ ಪ್ರದೇಶ ಮೂಲದವನಾಗಿದ್ದಾನೆ. ಸೋಂಕು ಹೆಚ್ಚಾಗಿರುವ ಕಾರಣ ಪ್ರಿಯತಮೆಯನ್ನು ನೋಡಲು ಸಾಧ್ಯವಾಗುತ್ತಿಲ್ಲ ಎನ್ನುವ ವಿಚಾರವಾಗಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಪಹದಿ ಶರೀಫ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಶ್ರೀನಗರ ಕಾಲೋನಿಯ ಹೋಟೆಲ್ವೊಂದರಲ್ಲಿ ಕೆಲಸಕ್ಕೆ ಸೇರಿದ್ದ ವಿನೀತ್ ಅದೇ ಪ್ರದೇಶದಲ್ಲೇ ವಾಸವಾಗಿದ್ದ. ಹುಟ್ಟೂರಾದ ಉತ್ತರ ಪ್ರದೇಶದಲ್ಲಿ ವಿನೀತ್ ಯುವತಿಯನ್ನು ಪ್ರೀತಿಸಿ ಮದುವೆ ಆಗುವುದಾಗಿ ಹೇಳಿದ್ದ. ಒಳ್ಳೆ ಜೀವನ ನಡೆಸಲು ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕೆಲಸವನ್ನು ಹುಡುಕಿಕೊಂಡು ಹೈದರಾಬಾದ್ಗೆ ಬಂದಿದ್ದ. 

ಒಂದು ದಿನ ಎಂದಿನಂತೆ ಕೆಲಸ ಮುಗಿಸಿ ಪ್ರೇಯಸಿಗೆ ಫೋನ್ ಮಾಡಿದಾಗ ಆಕೆ ಸಿಟ್ಟಾಗಿದ್ದಾಳೆ. ಮೂರು ವರ್ಷದಿಂದ ಯಾಕೆ ಬಂದಿಲ್ಲ ಎಂದು ಪ್ರಶ್ನಿಸಿದ್ದಾಳೆ. ಅಲ್ಲದೆ ನ್ಯೂ ಇಯರ್ಗೆ ಬರುವುದಾಗಿ ಹೇಳಿದ್ದ ವಿನೀತ್ಗೆ ಊರಿಗೆ ಊಗಲು ಸಾಧ್ಯವಾಗಿಲ್ಲ. ಈ ವಿಚಾರವಾಗಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments