Webdunia - Bharat's app for daily news and videos

Install App

ಹುಡುಗಿಯರು ಪೊಲೀಸರಿಗೆ ಕಾಯಬಾರದು, ತಾವೇ ರಕ್ಷಿಸಿಕೊಳ್ಳಬೇಕು; ಅಜ್ಮಿ

Webdunia
ಬುಧವಾರ, 4 ಜನವರಿ 2017 (17:31 IST)
ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಬ್ದಾರಿ ಹೇಳಿಕೆ ನೀಡಿ ಮಹಿಳಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಉತ್ತರ ಪ್ರದೇಶದ ಸಮಾಜವಾದಿ ನಾಯಕ ಮತ್ತೆ ಅದೇ ವಿಷಯಕ್ಕೆ ವಿವಾದವನ್ನು ಮೈಗೆಳೆದುಕೊಂಡಿದ್ದಾರೆ.
 

 
ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಮಹಿಳೆಯರೇ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದ್ದು, ಪೊಲೀಸರಿಗಾಗಿ ಕಾಯುವುದು ಸರಿಯಲ್ಲ ಎಂದು ಬುಧವಾರ ಅವರು ಹೇಳಿದ್ದಾರೆ.
 
ನನ್ನ ಬಳಿ ಇದ್ದ ಹಣ ಕಳ್ಳತನವಾದರೆ  ನಾನು ಮತ್ತೆ ಆ ಜಾಗದಲ್ಲಿ ಹಣವನ್ನಿಡುವುದಿಲ್ಲ. ಹಾಗೆಯೇ ನಮ್ಮ ಮಕ್ಕಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ದೌರ್ಜನ್ಯವೆಸಗುವವರಿಗೆ ಅವಕಾಶ ಮಾಡಿಕೊಡಬಾರದು. ಇದು ನಾನು ಮಹಿಳೆಯರಿಗೆ ಮಾಡುತ್ತಿರುವ ಅಪಮಾನವಲ್ಲ, ಪದಗಳ ಗೌರವ ಎಂದಿದ್ದಾರೆ ಅಜ್ಮಿ. 
 
ತಮ್ಮ ಹಿಂದಿನ ಹೇಳಿಕೆಗೆ ಸಮರ್ಥನೆ ನೀಡಿರುವ ಅವರು ನಾನು ಪ್ರತಿ ಹೆಣ್ಣುಮಗಳನ್ನು ಮಗಳು, ತಾಯಿಯಂತೆ ಗೌರವಿಸುತ್ತೇನೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದಿದ್ದಾರೆ. 
 
ಬೆಂಗಳೂರಿನಲ್ಲಿ ಹೊಸ ವರ್ಷದಂದು ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಅಜ್ಮಿ, ಯುವತಿಯರು ಅರೆನಗ್ನ ಡ್ರೆಸ್ ಧರಿಸಿ ಮಧ್ಯರಾತ್ರಿ ಪಾರ್ಟಿಗಳಲ್ಲಿ ಕುಣಿದಾಡಿ ರಾತ್ರಿ ರಸ್ತೆಗಳಲ್ಲಿ ಸಂಚರಿಸುತ್ತಿರುವುದಕ್ಕೆ ಲೈಂಗಿಕ ಕಿರುಕುಳದಂತಹ ಘಟನೆಗಳು ನಡೆಯುತ್ತಿವೆ. ಪುರುಷರು ಮತ್ತು ಮಹಿಳೆಯರ ನಡುವೆ ವ್ಯತ್ಯಾಸವಿದೆ. ಆದ್ದರಿಂದ,ಮಹಿಳೆಯರು ರಾತ್ರಿ ಹೊತ್ತಿನಲ್ಲಿ ಮನೆಯಿಂದ ಹೊರಗಡೆ ಕಾಲಿಡಬಾರದು ಎಂದು ಪುಕ್ಕಟೆ ಸಲಹೆ ನೀಡಿದ್ದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ