Webdunia - Bharat's app for daily news and videos

Install App

ವಾಸ್ತವತೆ ಅರಿಯಲು ಗ್ರಾಮಗಳಿಗೆ ಭೇಟಿ ನೀಡಿ: ಡಿಸಿಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್

Webdunia
ಗುರುವಾರ, 10 ಆಗಸ್ಟ್ 2017 (18:56 IST)
ವಾಸ್ತವ ಸ್ಥಿತಿಗತಿಯನ್ನು ಅರಿಯಲು ಫೈಲ್‌ಗಳನ್ನು ದೂರವಿಟ್ಟು ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಸಂದೇಶ ರವಾನಿಸಿದ್ದಾರೆ.  
ಜಿಲ್ಲಾಧಿಕಾರಿಗಳು ಜಿಲ್ಲಾ ಕೇಂದ್ರದಿಂದ ದೂರವಿರುವ ಪಟ್ಟಣ, ಗ್ರಾಮಗಳಲ್ಲಿರುವ ಆರೋಗ್ಯ ಸೇವಾ ಕೇಂದ್ರಗಳ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರಬೇಕು. ಗ್ರಾಮಗಳಿಗೆ ಭೇಟಿ ನೀಡುವ ಜಿಲ್ಲಾಧಿಕಾರಿಗಳು ಕೇವಲ ಫೈಲ್ ನೋಡಿ ತೀರ್ಮಾನ ತೆಗೆದುಕೊಳ್ಳುವವರಿಗಿಂತ ಹೆಚ್ಚಿನ ಅನುಭವ ಹೊಂದಿರುತ್ತಾರೆ ಎಂದು ತಿಳಿಸಿದ್ದಾರೆ
 
ಪ್ರಧಾನಮಂತ್ರಿ ನರೇಂದ್ರ ಮೋದಿ ನ್ಯೂ ಇಂಡಿಯಾ-ಮಂಥನ್ ಎನ್ನುವ ಕಾರ್ಯಕ್ರಮದಲ್ಲಿ ದೇಶದ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫ್‌ರೆನ್ಸ್ ಮೂಲಕ ಸಂವಾದ ನಡೆಸುತ್ತಿದ್ದರು.  
 
ಎಲ್ಇಡಿ ಬಲ್ಬ್‌ಗಳು, ಭೀಮ್ ಅಪ್ಲಿಕೇಶನ್, ಮುಂತಾದ ಕಾರ್ಯಕ್ರಮಗಳ ಪ್ರಯೋಜನಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಜಿಲ್ಲಾಧಿಕಾರಿಗಳು ಪ್ರಯತ್ನಿಸಬೇಕು ಎಂದು ಪ್ರಧಾನಿ ಹೇಳಿದ್ದಾರೆ. ಜನರಿಗೆ ಸೌಲಭ್ಯಗಳ ಅರಿವಿಲ್ಲ ಎನ್ನುವ ಕಾರಣಕ್ಕೆ ಸರಕಾರ ಜಾರಿಗೆ ತಂದ ಯೋಜನೆಗಳು ವಿಫಲವಾಗುತ್ತವೆ ಎಂದು ತಿಳಿಸಿದ್ದಾರೆ.
 
ಅದೇ ರೀತಿ, ಸ್ವಚ್ಚ ಭಾರತ್ ಅಭಿಯಾನ್ ಜನರಲ್ಲಿ ಒಂದು ಪ್ರತಿಕ್ರಿಯಾಶೀಲ ಆಡಳಿತ ಮತ್ತು ಅರಿವಿನ ಮೇಲೆ ಅವಲಂಬಿತವಾಗಿದೆ, ಈ ನಿಟ್ಟಿನಲ್ಲಿ ನಿಜವಾದ ಬದಲಾವಣೆಯು ಸಾರ್ವಜನಿಕ ಭಾಗವಹಿಸುವಿಕೆ ಮೂಲಕ ಮಾತ್ರ ಬರಬಹುದು ಎಂದು ಒತ್ತಿ ಹೇಳಿದರು.
 
ಜಿಎಸ್‌ಟಿಯ ಬಗ್ಗೆ ವ್ಯಾಪಾರಿಗಳಿಗೆ ಇದು ಯಾವ ರೀತಿಯಲ್ಲಿ ಒಳ್ಳೆಯದಾಗಿದೆ ಮತ್ತು ಸರಳ ತೆರಿಗೆಯಾಗಿದೆ ಎನ್ನುವುದರ ಬಗ್ಗೆ ಜಿಲ್ಲಾಧಿಕಾರಿಗಳು ವಿವರಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

Operation Sindoor, ಇದು ನಮಗೆ ಹೆಮ್ಮೆಯ ಸಂಗತಿ: ರಾಜನಾಥ್ ಸಿಂಗ್‌

Operation Sindoor: ರಾಜ್ಯ ಸರ್ಕಾರದಿಂದ ನಾಳೆ ತಿರಂಗಾ ಯಾತ್ರೆ

ಭಾರತ ದಾಳಿ ಭೀತಿ: ಲಾಹೋರ್‌ನಿಂದ ಕೂಡಲೇ ಹೊರಡುವಂತೆ ನಾಗರಿಕರಿಗೆ ಯುಎಸ್‌ ಸೂಚನೆ

ಮುಂದಿನ ಸುದ್ದಿ
Show comments