ಗೋಮಾಂಸಕ್ಕಾಗಿ ತಮ್ಮ ಸರಕಾರದ ವಿರುದ್ಧ ಕಿಡಿಕಾರಿದ ಗೋವಾ ಬಿಜೆಪಿ ಶಾಸಕ ಮೈಕಲ್ ಲೋಬೋ

Webdunia
ಶುಕ್ರವಾರ, 27 ಜುಲೈ 2018 (14:40 IST)
ಗೋವಾ : ಗೋ ಹತ್ಯೆದ ವಿರುದ್ಧ ಬಿಜೆಪಿ ಸರ್ಕಾರ ಹೋರಾಟ ಮಾಡುತ್ತಿರುವ ಹಿನ್ನಲೆಯಲ್ಲಿ ಗೋವಾದಲ್ಲಿ ಗೋಮಾಂಸದ ಕೊರತೆಯಾಗಿದೆ ಎಂದು ಗೋವಾ ಬಿಜೆಪಿ ಶಾಸಕ, ಉಪಸ್ಪೀಕರ್ ಮೈಕಲ್ ಲೋಬೋ ಅವರು ತಮ್ಮ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಗೋವಾದ ಪ್ರವಾಸೋದ್ಯಮದ ಹೃದಯ ಎಂದು ಕರೆಯಲಾಗಿರುವ ಕ್ಯಾಲಂಗುಟೆ ಕ್ಷೇತ್ರದ ಶಾಸಕರಾದ ಮೈಕಲ್ ಲೋಬೋ ಅವರು ಗೋವಾದಲ್ಲಿ ಅನೇಕರು ಗೋಮಾಂಸ ಸೇವಿಸುತ್ತಾರೆ. ಗೋಮಾಂಸ ತಿನ್ನಲೆಂದೇ ಇಲ್ಲಿಗೆ ಪ್ರವಾಸಿಗರು ಬರುತ್ತಾರೆ. ಆದರೆ, ಈಗ ಗೋಮಾಂಸದ ಕೊರತೆ ಉಂಟಾಗಿದೆ ಎಂದು ಹೇಳಿದ್ದಾರೆ.


ಹಾಗೇ ಗೋ ರಕ್ಷಕರು ಭಯದ ವಾತಾವರಣ ನಿರ್ಮಿಸುತ್ತಿದ್ದಾರೆ. ವ್ಯಾಪಾರಸ್ಥರು ಸೇರಿದಂತೆ ಜನತೆಗೆ ಬೆದರಿಕೆ ಹಾಕುತ್ತಿದ್ದಾರೆ. ಕೆಲವರು ಗೋ ರಕ್ಷಕರೆಂದು ಹೇಳಿಕೊಂಡು ರಾಜ್ಯದ ಗಡಿಯಲ್ಲಿ ನಿಂತು, ಗೋಮಾಂಸವನ್ನು ತಡೆಯುತ್ತಿದ್ದಾರೆ. ರಾಜ್ಯದಲ್ಲಿ ಮಾಂಸದ ಅಂಗಡಿಗಳು ಮುಚ್ಚುತ್ತಿವೆ. ಇದನ್ನು ತಡೆಯುವಲ್ಲಿ ನಾವು ವಿಫಲರಾಗಿದ್ದೇವೆ ಎಂದು ತಮ್ಮ ಸರಕಾರದ ವಿರುದ್ಧ ಅವರು ಕಿಡಿಕಾರಿದ್ದಾರೆ.


ಅಲ್ಲದೇ ನಾನು ಗೋ ರಕ್ಷಕರನ್ನು ಗೌರವಿಸುತ್ತೇನೆ. ಆದರೆ, ಗೋವಾದಲ್ಲಿ ಗೋಮಾಂಸ ಸೇವಕರು ಜಾಸ್ತಿ ಇದ್ದಾರೆ. ಇವರನ್ನು ತಡೆಯಲು ಸಾಧ್ಯವೇ ಇಲ್ಲ ಎಂದು ಹೇಳಿರುವ ಲೋಬೋ ಅವರು,ಈ ಬಗ್ಗೆ ಉತ್ತರ ನೀಡಬೇಕೆಂದು  ಸಿಎಂ ಮನೋಹರ್​ ಪರಿಕ್ಕರ್​ ಅವರನ್ನು ಒತ್ತಾಯಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments