Webdunia - Bharat's app for daily news and videos

Install App

ವೆಲಿಂಗ್‌ಕರ್ ವಜಾ ಪ್ರತಿಭಟಿಸಿ 400 ಕಾರ್ಯಕರ್ತರ ರಾಜೀನಾಮೆ: ಆರ್‌ಎಸ್ಸೆಸ್ ಎಚ್ಚರಿಕೆ

Webdunia
ಶುಕ್ರವಾರ, 2 ಸೆಪ್ಟಂಬರ್ 2016 (15:19 IST)
ರಾಜ್ಯ ಆರ್‌ಎಸ್ಸೆಸ್ ಅಧ್ಯಕ್ಷ ಸುಭಾಷ್ ವೆಲಿಂಗ್‌‍ಕರ್ ಅವರನ್ನು ವಜಾ ಮಾಡಿದ್ದನ್ನು ಪ್ರತಿಭಟಿಸಿ ರಾಜೀನಾಮೆ ಪ್ರಕಟಿಸಿದ  ತನ್ನ ಘಟಕದ 400ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಆರ್‌ಎಸ್ಸೆಸ್ ಕಟುವಾದ ಎಚ್ಚರಿಕೆಯನ್ನು ನೀಡಿದೆ. 

ಆರ್‌ಎಸ್ಸೆಸ್‌ನ ಯಾವುದೇ ಘಟಕವು ತಾನೇತಾನಾಗಿ ವಿಸರ್ಜನೆಯಾಗುವುದಿಲ್ಲ ಎಂದು ಆರ್‌ಎಸ್ಸೆಸ್ ವಕ್ತಾರ ಮನಮೋಹನ್ ವೈದ್ಯ ತಿಳಿಸಿದರು. ಗೋವಾ ಘಟಕ ಕಾರ್ಯನಿರ್ವಹಿಸಲಿದ್ದು, ಸದ್ಯದಲ್ಲೇ ಹೊಸ ಪದಾಧಿಕಾರಿಗಳನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
 
ಆರ್‌ಎಸ್ಸೆಸ್ ರಾಜ್ಯ ಘಟಕದ ಸದಸ್ಯರು ಬಂಡಾಯದ ಬಾವುಟ ಹಾರಿಸಿರುವುದು ಇದು ಮೊದಲ ಬಾರಿಯಾಗಿದೆ. ಪರಿಕ್ಕರ್ ಮತ್ತು ಗೋವಾ ಬಿಜೆಪಿ ಮುಖಂಡರ ಜತೆ ಜಟಾಪಟಿಗೆ ಇಳಿದಿದ್ದ ವೆಲಿಂಗ್‌ಕರ್ ಅವರನ್ನು ವಜಾ ಮಾಡಿದ ಕುರಿತು ಸಭೆ ನಡೆಸಿದ ಕಾರ್ಯಕರ್ತರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು. 
 
ಕೊಂಕಣಿ ಮತ್ತು ಮರಾಠಿ ಭಾಷೆಗಳಿಗಿಂತ ಇಂಗ್ಲಿಷ್ ಭಾಷೆಗೆ ಹೆಚ್ಚು ಉತ್ತೇಜನ ನೀಡುವ ಗೋವಾದ ಬಿಜೆಪಿ ಸರ್ಕಾರದ ಕ್ರಮವನ್ನು ವೆಲಿಂಗ್‌ಕರ್ ಟೀಕಿಸಿದ್ದರು. ಬಿಜೆಪಿ ನಾಯಕರ ಜತೆ ವೆಲಿಂಗ್‌ಕರ್ ಸುದೀರ್ಘ ಜಟಾಪಟಿಯ ಬಳಿಕ ಅವರನ್ನು ವಜಾ ಮಾಡುವ ಆರ್‌ಎಸ್ಸೆಸ್ ನಿರ್ಧಾರ ಹೊರಬಿದ್ದಿದೆ. ಮುಂದಿನ ವರ್ಷ ಗೋವಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಹೊಸ ರಾಜಕೀಯ ಪಕ್ಷವೊಂದಕ್ಕೆ ಬೆಂಬಲಿಸುವುದಾಗಿ ವೆಲಿಂಗ್‌ಕರ್ ಬೆದರಿಕೆ ಹಾಕಿದ್ದರು. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ