Publish Date: Tue, 14 Jun 2022 (08:26 IST)
Updated Date: Tue, 14 Jun 2022 (09:28 IST)
ಚೆನ್ನೈ : ಮೇಕೆದಾಟು ವಿಚಾರವಾಗಿ ತಮಿಳುನಾಡು ಮತ್ತೆ ಖ್ಯಾತೆ ತೆಗೆದಿದೆ. ಮೇಕೆದಾಟು ಸಂಬಂಧ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ ಬರೆದಿದ್ದಾರೆ.
ಜೂನ್ 17ರಂದು ನಡೆಯಲಿರುವ ಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಚರ್ಚಿಸದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಬೇಕು ಎಂದು ಸ್ಟಾಲಿನ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಾರ್ಯ ಚಟುವಟಿಕೆಯ ವ್ಯಾಪ್ತಿಯು ಸುಪ್ರೀಂಕೋರ್ಟ್ ನಿರ್ದೆಶನಗಳನ್ನು ಪಾಲಿಸುವ ಮಿತಿಯನ್ನು ಮಾತ್ರ ಹೊಂದಿದೆ. ಬೇರೆ ವಿಷಯಗಳನ್ನು ಪ್ರಾಧಿಕಾರ ಪರಿಗಣಿಸುವಂತಿಲ್ಲ.
ಮೇಕೆದಾಟು ಸಂಬಂಧ ತಮಿಳುನಾಡಿನ ಹಲವು ಅರ್ಜಿಗಳು ವಿಚಾರಣೆ ಹಂತದಲ್ಲಿದೆ.