ಅಮರನಾಥ ಯಾತ್ರಿಕರಿಗೆ ಗುಡ್ ನ್ಯೂಸ್ : ಹೆಲಿಕಾಪ್ಟರ್ ಸೌಲಭ್ಯವೂ ಲಭ್ಯ

Webdunia
ಸೋಮವಾರ, 10 ಜುಲೈ 2023 (10:22 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯ ಪ್ರಮಾಣ ತಗ್ಗಿ, ಹವಾಮಾನ ಪರಿಸ್ಥಿತಿ ಸುಧಾರಿಸಿದ್ದು ಈ ಹಿನ್ನೆಲೆ ಬಾಲ್ಟಾಲ್ ಬೇಸ್ನಿಂದ ಮತ್ತೆ ಅಮರನಾಥ ಯಾತ್ರೆ ಪುನರಾರಂಭಗೊಳಿಸಲಾಗಿದೆ.

ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೆಲಿಕಾಪ್ಟರ್ ಸೇವೆಯನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನದಿಂದ ಪಹಲ್ಗಾಮ್ ಬೇಸ್ನಿಂದ ಯಾತ್ರೆಯನ್ನು ಪುನರಾರಂಭ ಮಾಡಲಾಗಿತ್ತು. ಹವಾಮಾನ ಪರಿಸ್ಥಿತಿ ಸೂಕ್ತವಾಗಿದ್ದ ಹಿನ್ನೆಲೆ 6491 ಮಂದಿ ಯಾತ್ರಾರ್ಥಿಗಳು ಪವಿತ್ರ ಗುಹೆಯ ದರ್ಶನ ಪಡೆದರು. ಈಗ ಬಾಲ್ಟಾಲ್ ಭಾಗದಲ್ಲೂ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

116 ಸಾಧುಗಳು, 6 ಸಾದ್ವಿಗಳು ಸೇರಿ ಈವರೆಗೂ 93,929 ಯಾತ್ರಾರ್ಥಿಗಳು ಪವಿತ್ರ ಗುಹೆಯ ದರ್ಶನ ಪಡೆದಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಿರಿಯ ಅಧಿಕಾರಿಗಳು ಮತ್ತು ಅಮರನಾಥ ಯಾತ್ರಾ ಆಡಳಿತ ಮಂಡಳಿಯ ಜೊತೆಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಚರ್ಚಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭವಿಷ್ಯ ಇಂದು ತೀರ್ಮಾನಿಸಲಿದ್ದಾರೆ ಈ ನಾಲ್ವರು

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಮುಂದಿನ ಸುದ್ದಿ
Show comments