ಗ್ರಾಹಕರಿಗೆ ಸಿಹಿ ಸುದ್ದಿ : ಇಂದಿನಿಂದ ಕೆಜಿ ಟೊಮೆಟೋ ದರ ಇಳಿಸಲು ಕೇಂದ್ರ ನಿರ್ಧಾರ

Webdunia
ಸೋಮವಾರ, 17 ಜುಲೈ 2023 (10:34 IST)
ನವದೆಹಲಿ : ದೇಶದ ಹಲವೆಡೆ ಇಂದಿನಿಂದಲೇ ಜಾರಿಗೆ ಬರುವಂತೆ ಕೆಜಿಗೆ ಟೊಮೆಟೋ ದರವನ್ನು 80 ರೂ.ಗೆ ಇಳಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.

ದೇಶವ್ಯಾಪಿ 500 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಟೊಮೆಟೋ ಬೆಲೆ ಏರಿಕೆಯ ಪರಿಸ್ಥಿತಿ ಮರು ಮೌಲ್ಯಮಾಪನದ ನಂತರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಕೆಜಿ ಟೊಮೆಟೋವನ್ನು 80 ರೂ.ಗೆ ಮಾರಾಟ ಮಾಡಲು ನಿರ್ಧರಿಸಿದೆ. 

NAFED ಮತ್ತು NCCF ಮೂಲಕ ನೊಯ್ಡಾ, ಲಕ್ನೋ, ಕಾನ್ಪುರ್, ವಾರಣಾಸಿ, ಪಾಟ್ನಾ, ಮುಜಾಫರ್ಪುರ, ಅರ್ರಾ ಸೇರಿ ಅನೇಕ ಸ್ಥಳಗಳಲ್ಲಿ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳನ್ನು ಅವಲಂಬಿಸಿ ಟೊಮೆಟೋ ಮಾರಾಟಕ್ಕೆ ಕ್ರಮಕೈಗೊಂಡಿದೆ. ನಾಳೆಯಿಂದ ಹೆಚ್ಚಿನ ನಗರಗಳಿಗೆ ಇದನ್ನು ವಿಸ್ತರಿಸಲಾಗುವುದು ಎಂದು ಕೇಂದ್ರ ಪ್ರಕಟಣೆ ಮೂಲಕ ತಿಳಿಸಿದೆ.

ಮಾನ್ಸೂನ್ ಮಳೆ ಕಾರಣ ಚಿಲ್ಲರೆ ಮಾರುಕಟ್ಟೆಗಳಲ್ಲಿ ಶನಿವಾರದಂದು ಟೊಮೆಟೋ ಬೆಲೆ ಪ್ರಮುಖ ನಗರಗಳಲ್ಲಿ ಪ್ರತಿ ಕೆಜಿಗೆ 250 ರೂ. ಮಾರಾಟವಾಗುತ್ತಿತ್ತು. ಸರ್ಕಾರದ ಅಂಕಿಅಂಶಗಳ ಪ್ರಕಾರ, ಅಖಿಲ ಭಾರತ ಸರಾಸರಿ ಬೆಲೆ ಪ್ರತಿ ಕೆಜಿಗೆ 117 ರೂ. ಚಿಲ್ಲರೆ ಗ್ರಾಹಕರಿಗೆ ಪರಿಹಾರ ನೀಡಲು, ದೆಹಲಿ-ಎನ್ಸಿಆರ್, ಪಾಟ್ನಾ ಮತ್ತು ಲಕ್ನೋದಂತಹ ಆಯ್ದ ನಗರಗಳಲ್ಲಿ ಕೇಂದ್ರವು ಪ್ರತಿ ಕೆಜಿಗೆ 90 ರೂ.ಗೆ ರಿಯಾಯಿತಿ ದರದಲ್ಲಿ ಟೊಮೆಟೋವನ್ನು ಮಾರಾಟ ಮಾಡುತ್ತಿದೆ. ಮೊಬೈಲ್ ವ್ಯಾನ್ಗಳ ಮೂಲಕ ಶನಿವಾರ ದೆಹಲಿ-ಎನ್ಸಿಆರ್ನಲ್ಲಿ ಸುಮಾರು 18,000 ಕೆಜಿ ಮಾರಾಟವಾಗಿದೆ. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments