Webdunia - Bharat's app for daily news and videos

Install App

ಕೇಂದ್ರ ಸರ್ಕಾರದಿಂದ ಸದ್ಯದಲ್ಲೇ ಪಿಎಂ ಕಿಸನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

Krishnaveni K
ಮಂಗಳವಾರ, 16 ಜುಲೈ 2024 (09:12 IST)
ನವದೆಹಲಿ: ಈ ಬಾರಿ ಬಜೆಟ್ ನಲ್ಲಿ ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ ಸಿಗುವ ನಿರೀಕ್ಷೆಯಿದೆ. ಕೇಂದ್ರ ಬಜೆಟ್ ಮಂಡನೆಗೆ ಕೆಲವೇ ದಿನ ಬಾಕಿಯಿದ್ದು ರೈತರು ಭಾರೀ ನಿರೀಕ್ಷೆಯಲ್ಲಿದ್ದಾರೆ.

ಕೇಂದ್ರ ಸರ್ಕಾರ ರೈತರಿಗಾಗಿ ಈಗ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ 6000 ರೂ. ನೀಡುತ್ತಿದೆ. ಇದನ್ನು ಅನೇಕ ಫಲಾನುಭವಿ ರೈತರಿಗೆ ನೇರವಾಗಿ ಅವರ ಖಾತೆಗಳಿಗೇ ನೀಡಲಾಗುತ್ತಿದೆ. 2019 ರಲ್ಲಿ ಮೋದಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿತ್ತು. ಇದರಿಂದ ಅನೇಕರಿಗೆ ಅನುಕೂಲವಾಗುತ್ತಿದೆ.

ಇದೀಗ ಮೋದಿ ಸರ್ಕಾರ ಮೂರನೇ ಅವಧಿ ಆರಂಭವಾಗಿದ್ದು, ಈ ಬಾರಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಹಣ ಹೆಚ್ಚಳ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈಗ ನೀಡಲಾಗುತ್ತಿರುವ 6000 ರೂ. ಬದಲಾಗಿ 2 ಸಾವಿರ ರೂ ಹೆಚ್ಚಳ ಮಾಡಿ 8000 ರೂ. ನೀಡುವ ಸಾಧ್ಯತೆಯಿದೆ. ಇದನ್ನು ಈ ಬಜೆಟ್ ನಲ್ಲಿ ಘೋಷಣೆ ಮಾಡಬಹುದು ಎಂಬ ನಿರೀಕ್ಷೆಯಿದೆ.

ಅನೇಕ ಕೃಷಿ ತಜ್ಞರು ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಸಲಹೆ ನೀಡಿದ್ದಾರೆ .ಹೀಗಾಗಿ ತಜ್ಞರ ಸಲಹೆಯನ್ನು ಕೇಂದ್ರ ಪರಿಗಣಿಸುವ ಸಾಧ್ಯತೆಯಿದೆ. ಒಟ್ಟು ಮೂರು ಕಂತುಗಳಲ್ಲಿ ಕೇಂದ್ರ ಸರ್ಕಾರ ತಲಾ 2 ಸಾವಿರ ರೂ.ಗಳಂತೆ ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡುತ್ತಿದ್ದಾರೆ. ಇನ್ನೀಗ ಈ ಹಣ ಏರಿಕೆಯಾಗುವ ನಿರೀಕ್ಷೆ ರೈತರದ್ದು. ಕಳೆದ ಮಧ್ಯಂತರ ಬಜೆಟ್ ನಲ್ಲೂ ಕೇಂದ್ರ ಹೆಚ್ಚಿನ ಕೊಡುಗೆ ನೀಡಿರಲಿಲ್ಲ. ಹೀಗಾಗಿ ಈ ಬಾರಿ ಬಂಪರ್ ಕೊಡುಗೆ ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments