Webdunia - Bharat's app for daily news and videos

Install App

ಕೇಂದ್ರ ಸರ್ಕಾರದಿಂದ ಸದ್ಯದಲ್ಲೇ ಪಿಎಂ ಕಿಸನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

Krishnaveni K
ಮಂಗಳವಾರ, 16 ಜುಲೈ 2024 (09:12 IST)
ನವದೆಹಲಿ: ಈ ಬಾರಿ ಬಜೆಟ್ ನಲ್ಲಿ ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ ಸಿಗುವ ನಿರೀಕ್ಷೆಯಿದೆ. ಕೇಂದ್ರ ಬಜೆಟ್ ಮಂಡನೆಗೆ ಕೆಲವೇ ದಿನ ಬಾಕಿಯಿದ್ದು ರೈತರು ಭಾರೀ ನಿರೀಕ್ಷೆಯಲ್ಲಿದ್ದಾರೆ.

ಕೇಂದ್ರ ಸರ್ಕಾರ ರೈತರಿಗಾಗಿ ಈಗ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ 6000 ರೂ. ನೀಡುತ್ತಿದೆ. ಇದನ್ನು ಅನೇಕ ಫಲಾನುಭವಿ ರೈತರಿಗೆ ನೇರವಾಗಿ ಅವರ ಖಾತೆಗಳಿಗೇ ನೀಡಲಾಗುತ್ತಿದೆ. 2019 ರಲ್ಲಿ ಮೋದಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿತ್ತು. ಇದರಿಂದ ಅನೇಕರಿಗೆ ಅನುಕೂಲವಾಗುತ್ತಿದೆ.

ಇದೀಗ ಮೋದಿ ಸರ್ಕಾರ ಮೂರನೇ ಅವಧಿ ಆರಂಭವಾಗಿದ್ದು, ಈ ಬಾರಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಹಣ ಹೆಚ್ಚಳ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈಗ ನೀಡಲಾಗುತ್ತಿರುವ 6000 ರೂ. ಬದಲಾಗಿ 2 ಸಾವಿರ ರೂ ಹೆಚ್ಚಳ ಮಾಡಿ 8000 ರೂ. ನೀಡುವ ಸಾಧ್ಯತೆಯಿದೆ. ಇದನ್ನು ಈ ಬಜೆಟ್ ನಲ್ಲಿ ಘೋಷಣೆ ಮಾಡಬಹುದು ಎಂಬ ನಿರೀಕ್ಷೆಯಿದೆ.

ಅನೇಕ ಕೃಷಿ ತಜ್ಞರು ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಸಲಹೆ ನೀಡಿದ್ದಾರೆ .ಹೀಗಾಗಿ ತಜ್ಞರ ಸಲಹೆಯನ್ನು ಕೇಂದ್ರ ಪರಿಗಣಿಸುವ ಸಾಧ್ಯತೆಯಿದೆ. ಒಟ್ಟು ಮೂರು ಕಂತುಗಳಲ್ಲಿ ಕೇಂದ್ರ ಸರ್ಕಾರ ತಲಾ 2 ಸಾವಿರ ರೂ.ಗಳಂತೆ ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡುತ್ತಿದ್ದಾರೆ. ಇನ್ನೀಗ ಈ ಹಣ ಏರಿಕೆಯಾಗುವ ನಿರೀಕ್ಷೆ ರೈತರದ್ದು. ಕಳೆದ ಮಧ್ಯಂತರ ಬಜೆಟ್ ನಲ್ಲೂ ಕೇಂದ್ರ ಹೆಚ್ಚಿನ ಕೊಡುಗೆ ನೀಡಿರಲಿಲ್ಲ. ಹೀಗಾಗಿ ಈ ಬಾರಿ ಬಂಪರ್ ಕೊಡುಗೆ ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments