Webdunia - Bharat's app for daily news and videos

Install App

ಯುಪಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಗೋಪಾಲ್‌ಕೃಷ್ಣ ಗಾಂಧಿ ಕಣಕ್ಕೆ

Webdunia
ಮಂಗಳವಾರ, 11 ಜುಲೈ 2017 (17:44 IST)
ಉಪರಾಷ್ಟ್ರಪತಿ ಚುನಾವಣೆಗೆ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರನ್ನು ಅಭ್ಯರ್ಥಿಯಾಗಿ ಯುಪಿಎ ಮೈತ್ರಿಕೂಟ ಆಯ್ಕೆ ಮಾಡಿದೆ.
 
ಸಂಸತ್ತಿನಲ್ಲಿ ಇಂದು ಯುಪಿಎ ಮೈತ್ರಿಕೂಟದ 18 ಪಕ್ಷಗಳ ನಾಯಕರು ಒಂದು ಕಡೆ ಸಭೆ ಸೇರಿ ಚರ್ಚಿಸಿದ ನಂತರ ಅಂತಿಮವಾಗಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿಯನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.  
 
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, 18 ಪಕ್ಷಗಳು ಅವಿರೋಧವಾಗಿ ಗಾಂಧಿಯವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿಸಲು ಸಮ್ಮತಿ ಸೂಚಿಸಿವೆ ಎಂದು ತಿಳಿಸಿದ್ದಾರೆ.
 
ವಿಪಕ್ಷಗಳು ಉಪರಾಷ್ಟ್ರಪತಿ ಅಭ್ಯರ್ಥಿಯಾಗುವಂತೆ ಮಾಡಿದ ಮನವಿಗೆ ಗೋಪಾಲಕೃಷ್ಣ ಗಾಂಧಿ ಸ್ಪಂದಿಸಿದ್ದಾರೆ ಎಂದರು.
 
ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ರಾಮಾನಾಥ್ ಕೋವಿಂದ್ ಅವರನ್ನು ಜೆಡಿಯು ಬೆಂಬಲಿಸಿತ್ತು. ಇದೀಗ ಜೆಡಿಯು ಮುಖಂಡ ಶರದ್ ಯಾದವ್ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಸೋನಿಯಾ ಗಾಂಧಿ, ಟಿಎಂಸಿ ಮುಖಂಡ ಡೆರೆಕ್ ಓ ಬ್ರಿಯಾನ್, ಸಿಪಿಐ(ಎಂ) ಸೀತಾರಾಮ್ ಯಚೂರಿ, ಎನ್‌ಸಿ ಓಮರ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ನರೇಶ್ ಅಗರ್‌ವಾಲ್, ಬಿಎಸ್‌ಪಿಯ ಸತೀಶ್ ಚಂದ್ರ ಮಿಶ್ರಾ ಸೇರಿದಂತೆ ಇತರ ನಾಯಕರು ಸಭೆಗೆ ಹಾಜರಾಗಿದ್ದರು.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments