Webdunia - Bharat's app for daily news and videos

Install App

ಪೋಷಕರು ಹಾಗೂ ಒಡಹುಟ್ಟಿದವರನ್ನು ಕಡೆಗಾಣಿಸಿದರೆ ಸರ್ಕಾರಿ ನೌಕರರ ಸಂಬಳ ಕಟ್

Webdunia
ಶನಿವಾರ, 28 ಜುಲೈ 2018 (14:37 IST)
ಅಸ್ಸಾಂ : ಪೋಷಕರನ್ನು ನೋಡಿಕೊಳ್ಳದಿದ್ದರೆ ಮಗನಿಗೆ ನೀಡಿದ ಆಸ್ತಿಯನ್ನು ತಂದೆ ವಾಪಾಸು ಪಡೆಯಬುಹುದು ಎಂದು ಇತ್ತೀಚೆಗಷ್ಟೇ ಬಾಂಬೆ ಹೈಕೋರ್ಟ್ ತೀರ್ಪನ್ನು ನೀಡಿತ್ತು. ಅದೇರೀತಿ ಇದೀಗ ಪೋಷಕರು ಹಾಗೂ ಒಡಹುಟ್ಟಿದವರನ್ನು ಕಡೆಗಣಿಸಿದರೆ ಅಂತಹವರ ಸರ್ಕಾರಿ ಸಂಬಳವನ್ನು ಕಟ್ ಮಾಡುವುದಾಗಿ ಅಸ್ಸಾಂ ಸರ್ಕಾರ ಹೊಸ ಕಾನೂನನ್ನು ಜಾರಿಗೆ ತಂದಿದೆ.


ಈ ಕಾನೂನು ಅಕ್ಟೋಬರ್ 2 ರಿಂದ ಅಸ್ಸಾಂನಲ್ಲಿ ಜಾರಿಗೆ ಬರಲಿದ್ದು, ಅದರ ಪ್ರಕಾರ ಯಾವುದೇ ಆದಾಯವಿರದ ಪೋಷಕರು ಹಾಗೂ ದಿವ್ಯಾಂಗ ಸಹೋದರ ಹಾಗೂ ಸಹೋದರಿಯರನ್ನು ನೌಕರರು ಸರಿಯಾಗಿ ನೋಡಿಕೊಳ್ಳ ಬೇಕು. ಒಂದು ವೇಳೆ ನೋಡಿಕೊಳ್ಳದೆ ಹೋದರೇ ಸರಕಾರಿ ನೌಕರರ ಒಂದು ತಿಂಗಳ ಒಟ್ಟು ವೇತನದಲ್ಲಿ ಶೇ. 10 - 15 ರಷ್ಟು ಕಡಿತಗೊಳ್ಳಲಿದೆ ಎನ್ನಲಾಗಿದೆ.


ಕೊನೆಗಾಲದಲ್ಲಿ ಪೋಷಕರು ವೃದ್ದಶ್ರಮಗಳಲ್ಲಿ ಕಾಲಕಳೆಯುವುದನ್ನು ತಪ್ಪಿಸುವ  ಅಸ್ಸಾಂ ಸರ್ಕಾರದ ಈ ಕಾನೂನು ದೇಶವ್ಯಾಪ್ತಿ ವಿಸ್ತರಣೆ ಮಾಡುವಂತೆ ಜನತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments