Select Your Language

Notifications

webdunia
webdunia
webdunia
webdunia

ಕೊರೊನಾದಿಂದ ಮುಂದಾಗುವ ನಷ್ಟ ತಿಳಿದೇ ಸರ್ಕಾರ ಲಾಕ್ ಡೌನ್ ಮಾಡಿದೆ- ಪ್ರಹ್ಲಾದ್ ಜೋಶಿ

ಕೊರೊನಾದಿಂದ ಮುಂದಾಗುವ ನಷ್ಟ ತಿಳಿದೇ ಸರ್ಕಾರ ಲಾಕ್ ಡೌನ್ ಮಾಡಿದೆ- ಪ್ರಹ್ಲಾದ್ ಜೋಶಿ
ನವದೆಹಲಿ , ಶುಕ್ರವಾರ, 10 ಏಪ್ರಿಲ್ 2020 (09:26 IST)
ನವದೆಹಲಿ : ಕೊರೊನಾದಿಂದ ಮುಂದಾಗುವ ನಷ್ಟ ತಿಳಿದೇ ಸರ್ಕಾರ ಲಾಕ್ ಡೌನ್ ಮಾಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಇನ್ನು ಪರಿಸ್ಥಿತಿ ಕೈಮೀರಿಲ್ಲ. ಸರ್ಕಾರ ಇದನ್ನು ನಿಭಾಯಿಸುವ ಪ್ರಯತ್ನ ಮಾಡುತ್ತಿದೆ. ಲಾಕ್ ಡೌನ್ ಮೂಲಕ ಮುಂದಾಗಬಹುದಾದ ದೊಡ್ಡ ಅನಾಹುತವನ್ನು ತಡೆಯುವ ಪ್ರಯತ್ನದಲ್ಲಿದೆ. ಆದರೆ ಇದಕ್ಕೆ ಜನರ ಸಹಕಾರ ಅಗತ್ಯ ಎಂದು ಹೇಳಿದ್ದಾರೆ.

 

ಲಾಕ್ ಡೌನ್ ಮುಂದುವರಿಸುವ ಬಗ್ಗೆ ಪ್ರಧಾನಿ ಮೋದಿ ಚಿಂತನೆ ನಡೆಸಿದ್ದು, ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಎಲ್ಲಾ ಸಿಎಂಗಳ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಉಚಿತ ಹಾಲು, ದಿನಸಿ ಪಡೆಯಲು ಲಾಕ್ ಡೌನ್ ನಿಯಮ ಮರೆಯುತ್ತಿರುವ ಜನ