Select Your Language

Notifications

webdunia
webdunia
webdunia
webdunia

ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ : ಅಸಾದುದ್ದೀನ್

ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ : ಅಸಾದುದ್ದೀನ್
ಗಾಂಧೀನಗರ , ಶುಕ್ರವಾರ, 15 ಏಪ್ರಿಲ್ 2022 (11:37 IST)
ಗಾಂಧೀನಗರ : ಈ ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ. ಅದಕ್ಕೆ ಗಲಭೆಗೆ ಸಹಕರಿಸಿದೆ ಎಂದು ರಾಮನವಮಿಯಂದು ನಡೆದ ಹಿಂಸಾಚಾರ ಖಂಡಿಸಿ ಗುಜರಾತ್ ಸರ್ಕಾರದ ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಎಷ್ಟು ದಿನ ಹಳೆಯ ಕಥೆಗಳನ್ನು ಹೊರತರುತ್ತೀರಿ? ನಿಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಿ. ನೀವೇ ಜಟಿಲರು. ಭಜನೆ ಮಾಡಬೇಕು, ಆದರೆ ಯಾವ ರೀತಿಯ ಘೋಷಣೆಗಳು ಎದ್ದವು? 50-100 ಕತ್ತಿಗಳನ್ನು ಬೀಸಲಾಗಿದೆ. ಪೊಲೀಸರ ಸಮ್ಮುಖದಲ್ಲಿಯೇ ಇದನ್ನು ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಗುಪ್ತಚರ ಇಲಾಖೆ ವರದಿಯಿದ್ದರೆ ನೀವು ಏಕೆ ಮಲಗಿದ್ದೀರಿ? ನೀವು ಅದನ್ನು ಬಹಿರಂಗಪಡಿಸಬೇಕು. ಹೆಚ್ಚಿನ ಪೋಲಿಸ್ ಪಡೆಯನ್ನು ನಿಯೋಜಿಸಿ, ಹಿಂಸಾಚಾರವನ್ನು ನಿಲ್ಲಿಸಬೇಕು. ನಿಮ್ಮ ಜಟಿಲ ವರ್ತನೆಯನ್ನು ಮರೆಮಾಡಲು ಕಥೆಗಳನ್ನು ಹೇಳುತ್ತೀರಿ. ಅಂತಹ ಕಥೆಗಳು ಈಗ ಹಳೆಯದಾಗಿವೆ ಎಂದು ಚಾಟಿ ಬೀಸಿದ್ದಾರೆ.

ಇದು ರಾಜ್ಯ ಸರ್ಕಾರದ ಜವಾಬ್ದಾರಿ ಮತ್ತು ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಬಂಧಿಸಿ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡಬೇಕು : ಖಾದರ್