Select Your Language

Notifications

webdunia
webdunia
webdunia
webdunia

ಐದಲ್ಲ, 10 ಕೆಜಿ ಅಕ್ಕಿಗೆ ಸರ್ಕಾರ ಹಣ ನೀಡಬೇಕು : ಪ್ರಹ್ಲಾದ್ ಜೋಶಿ

ಐದಲ್ಲ, 10 ಕೆಜಿ ಅಕ್ಕಿಗೆ ಸರ್ಕಾರ ಹಣ ನೀಡಬೇಕು : ಪ್ರಹ್ಲಾದ್ ಜೋಶಿ
ನವದೆಹಲಿ , ಗುರುವಾರ, 29 ಜೂನ್ 2023 (08:29 IST)
ನವದೆಹಲಿ : ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿಗೆ ಹಣವನ್ನು ನೀಡಬೇಕು ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

5 ಕೆಜಿ ಅಕ್ಕಿಯ ಬದಲಿಗೆ ಪ್ರತಿ ಕೆಜಿಗೆ 34 ರೂಪಾಯಿಂತೆ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲು ಮುಂದಾದ ಕಾಂಗ್ರೆಸ್ ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ನೀಡುವುದಾಗಿ ಆಶ್ವಾಸನೆ ನೀಡಿದ್ದರು. ಈ ಕಾರಣಕ್ಕೆ 10 ಕೆಜಿ ಅಕ್ಕಿಗೆ ಹಣವನ್ನು ನೀಡಬೇಕು ಎಂದು ಹೇಳಿದರು. 

10 ಕೆಜಿ ಬೇಕಾ ಬೇಡ್ವಾ ಕೈ ಎತ್ತಿ ಎಂದು ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಸಿದ್ದರಾಮಯ್ಯನವರು ನಾವೇ ಅಕ್ಕಿಕೊಟ್ಟಿದ್ದು ಎಂದು ದಾರಿ ತಪ್ಪಿಸುತ್ತಿದ್ದರು. ಇವತ್ತು ಮೊದಲ ಬಾರಿಗೆ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಕನಿಷ್ಠ ಪಕ್ಷ 5 ಕೆಜಿಗೆ ಹಣ ನೀಡುತ್ತಿದ್ದಾರೆ ಎನ್ನುವುದೇ ಸಮಾಧಾನ ಎಂದು ವಾಗ್ದಾಳಿ ನಡೆಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

15 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ! ದಾಳಿಯಲ್ಲಿ ಸಿಕ್ಕಿದ್ದಾದ್ರು ಏನು?